ಉಡುಪಿ ಹತ್ಯಾಕಾಂಡ: ಹಂತಕ ಪ್ರವೀಣ್ ಚೌಗುಲೆ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

Prasthutha|

ಉಡುಪಿ: ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿದ್ದ ನೇಜಾರಿನ ತಾಯಿ, ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ನ್ಯಾಯಾಲಯದ ಅನುಮತಿ ಪಡೆದು ಸೋಮವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಇಂದು ಸ್ಥಳಾಂತರಿಸಲಾಗಿದೆ.

- Advertisement -


ಪ್ರಾಣ ಭಯ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಹಿರಿಯಡ್ಕ ಜಿಲ್ಲಾ ಕಾರಾಗೃಹದಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.


ಜಿಲ್ಲಾ ಕಾರಾಗೃಹದಲ್ಲಿನ ಭದ್ರತೆ ಕೊರತೆಯ ಹಿನ್ನೆಲೆಯಲ್ಲಿ ಆತನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಜೈಲಾಧಿಕಾರಿಗಳು ಉಡುಪಿ ನ್ಯಾಯಾಲಯದಿಂದ ಅನುಮತಿಯನ್ನು ಪಡೆದುಕೊಂಡಿದ್ದರು.

Join Whatsapp