ಉಡುಪಿ: ರೋಹಿತ್ ಚಕ್ರತೀರ್ಥ ವಿರುದ್ಧ ಬಿಲ್ಲವ ಸಂಘಟನೆಗಳಿಂದ ಪ್ರತಿಭಟನೆ

Prasthutha|

ಉಡುಪಿ: ಯಕ್ಷಗಾನ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಲೇಖಕ
ರೋಹಿತ್ ಚಕ್ರತೀರ್ಥ ವಿರುದ್ಧ ಬಿಲ್ಲವ ಸಂಘಟನೆಗಳು ಶನಿವಾರ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದೆ.

- Advertisement -

ರೋಹಿತ್ ಚಕ್ರತೀರ್ಥ ಅವರು ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟು ಗುರುಗಳಿಗೆ ಹಾಗೂ ಬಿಲ್ಲವ ಸಮಾಜಕ್ಕೆ ಅವಮಾನ ಮಾಡಿದ್ದಾರೆ.
ಅವರಿಗೆ ಸಮ್ಮೇಳನದಲ್ಲಿ ಭಾಷಣ ಮಾಡಲು ಅವಕಾಶ ನೀಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಸಮ್ಮೇಳನ ನಡೆಯುವ ಸ್ಥಳದ ಕಡೆಗೆ ಹೊರಟ
ಪ್ರತಿಭಟನಾಕಾರರನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು
ತಡೆದಿದ್ದಾರೆ. ಈ ವೇಲಕೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

- Advertisement -

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಗೆಜ್ಜೆಗಿರಿ ಮೇಳದ ಜಿಲ್ಲಾ ಸಂಚಾಲಕ ನವೀನ್ ಅಮೀನ್ ‘ಜಗತ್ತಿಗೆ ಮಾನವತೆಯ ಸಂದೇಶ ಸಾರಿದ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟಿರುವ ರೋಹಿತ್ ಚಕ್ರತೀರ್ಥಗೆ ಸಮ್ಮೇಳನದಲ್ಲಿ ದಿಕ್ಕೂಚಿ ಭಾಷಣಕ್ಕೆ ಅವಕಾಶ ನೀಡಿದರೆ ಮುಂದೆ ಮತ್ತಷ್ಟು ಮಾರಕ ಬರಹಗಳನ್ನು ಪಠ್ಯದಲ್ಲಿ ತುಂಬುವ ಅಪಾಯವಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ ಮಾತನಾಡಿ,
‘ನಾರಾಯಣ ಗುರುಗಳಿಗೆ ಮಾತ್ರವಲ್ಲ; ನಾಡಗೀತೆಗೂ ಅವಮಾನ
ಮಾಡಿದ ವ್ಯಕ್ತಿಯನ್ನು ಸಮ್ಮೇಳನದಲ್ಲಿ ದಿಕ್ಕೂಚಿ ಭಾಷಣ
ಮಾಡಲು ಕರೆತಂದಿರುವುದು ಖಂಡನೀಯ’ ಎಂದರು.

ಪ್ರತಿಭಟನೆಯಲ್ಲಿ ಮುಖಂಡರಾದ ಸುನೀಲ್ ಬಂಗೇರ, ಮಾಧವ ಬನ್ನಂಜೆ, ದೀಪಕ್ ಕೋಟ್ಯಾನ್ ಸೇರಿದಂತೆ ಹಲವು ಸಮಾಜದ ಮುಖಂಡರು ಭಾಗವಹಿಸಿದ್ದರು.

Join Whatsapp