Home ಕರಾವಳಿ ಉಡುಪಿ | ಮಂಗಳಮುಖಿಯರ ವಿರುದ್ಧ ಕಾರ್ಯಾಚರಣೆಗಿಳಿದ ಎಸ್ಪಿ

ಉಡುಪಿ | ಮಂಗಳಮುಖಿಯರ ವಿರುದ್ಧ ಕಾರ್ಯಾಚರಣೆಗಿಳಿದ ಎಸ್ಪಿ

ಉಡುಪಿ: ಸಿಟಿ ಬಸ್ ನಿಲ್ದಾಣದಲ್ಲಿ ಮಂಗಳಮುಖಿಯರ ಅನೈತಿಕ ದಂಧೆಯ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಉಡುಪಿ ಎಸ್ಪಿ ಅಕ್ಷಯ್ ಹಾಕೆ ಮಚ್ಚಿಂದ್ರ ಸ್ವತಃ ತಾವೇ ಕಾರ್ಯಾಚರಣೆ ನಡೆಸಿದ್ದಾರೆ.


ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿದ ಎಸ್ಪಿ ದಾಳಿಗೆ ಮಂಗಳಮುಖಿಯರೇ ದಂಗಾಗಿದ್ದಾರೆ. ಎಸ್ಪಿ ಎಂದು ತಿಳಿಯದ ಮಂಗಳಮುಖಿಯರು ಅವಾಚ್ಯ ಶಬ್ದಗಳಿಂದ ಎಸ್ಪಿಗೆ ಬೈದು ನಿಂದಿಸಿದ್ದಾರೆ.


ಕಾರ್ಯಾಚರಣೆ ವೇಳೆ ಇಬ್ಬರು ಮಧ್ಯವರ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗ್ರಾಹಕರನ್ನು ರಿಕ್ಷಾದಲ್ಲಿ ಕರೆ ತಂದು ಅನೈತಿಕ ದಂಧೆಗೆ ನೂಕುತ್ತಿದ್ದ ಇಬ್ಬರ ವಿರುದ್ಧ ಸಾರ್ವಜನಿಕರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ವತಃ ಎಸ್ಪಿ ಕಾರ್ಯಾಚರಣೆಗಿಳಿದಿದ್ದರು ಎನ್ನಲಾಗಿದೆ.

Join Whatsapp
Exit mobile version