ಉಡುಪಿ | 10 ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ಗದರಿದ ಪ್ರಿನ್ಸಿಪಾಲ್: ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ಉಡುಪಿ: ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಬಂತು ಎಂದು ಪ್ರಿನ್ಸಿಪಾಲ್ ಬೈದದಕ್ಕೆ ಮನನೊಂದ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆ ಪೆರ್ಡೂರಿನ ಮನೆಯೊಂದರಲ್ಲಿ ನಡೆದಿದೆ.

- Advertisement -


ಹೆಬ್ರಿಯಲ್ಲಿರುವ ಎಸ್ ಆರ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ತೃಪ್ತಿ (೧೭) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


ಉನ್ನತ ಶ್ರೇಣಿಯಲ್ಲಿ ಪಾಸಾಗಿ ಉಚಿತ ಸೀಟ್ ಪಡೆದಿದ್ದ ವಿದ್ಯಾರ್ಥಿನಿಗೆ ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಬಂತು ಎಂದು ಪ್ರಿನ್ಸಿಪಾಲ್ ಬೈದಿದ್ದಾರೆ ಎನ್ನಲಾಗ್ತಿದೆ. ಈ ಮಾತಿನಿಂದ ಬೇಸರಗೊಂಡ ವಿದ್ಯಾರ್ಥಿನಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp