ಉಳ್ಳಾಲ | ಬೈಕ್ ಗೆ ಮೀನಿನ ಲಾರಿ ಡಿಕ್ಕಿ: ಸವಾರ ಸಾವು

Prasthutha|

ಉಳ್ಳಾಲ: ಬೈಕ್ ಗೆ ಮೀನಿನ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಬೈಪಾಸ್ ಬಳಿ ನಡೆದಿದೆ.

- Advertisement -

ಮೃತರನ್ನು ಕಾಸರಗೋಡು ಕುಂಬಳೆ ನಿವಾಸಿ ನಿತಿನ್ ಮಾನ್ಯ(22) ಎಂದು ಗುರುತಿಸಲಾಗಿದೆ.

ನಿತಿನ್ ಮಂಗಳೂರು ಕಡೆಯಿಂದ ಕುಂಬಳೆ ಕಡೆಗೆ ಬೈಕಿನಲ್ಲಿ ತೆರಳುವ ಸಂದರ್ಭ , ಕುಂಪಲ ಬೈಪಾಸ್ ನಲ್ಲಿ ಇಡಲಾದ ಬ್ಯಾರಿಕೇಡ್ ತಪ್ಪಿಸುವ ವೇಳೆ ಹಿಂಬದಿಯಿಂದ ಮಲ್ಪೆಯಿಂದ ಕಾಸರಗೋಡಿನತ್ತ ತೆರಳುತ್ತಿದ್ದ ಮೀನಿನ ಲಾರಿ ಢಿಕ್ಕಿ ಹೊಡೆದಿದೆ. ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp