ಉಳ್ಳಾಲ: ಕೊಲೆಯತ್ನ ಪ್ರಕರಣ: ಪ್ರಮುಖ ಆರೋಪಿ ತಲ್ಹತ್ ಬಜಾಲ್ ಬಂಧನ

Prasthutha|

ಉಳ್ಳಾಲ: ನಾಲ್ಕು ತಿಂಗಳ ಹಿಂದೆ ಉಚ್ಚಿಲ ನಿವಾಸಿ ಆರಿಫ್ ಎಂಬಾತನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ತಲ್ಹತ್ ಬಜಾಲ್ ಎಂಬಾತನನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ.

- Advertisement -

ಈ ಕೊಲೆಯತ್ನ ಪ್ರಕರಣದಲ್ಲಿ 7 ಮಂದಿ ಆರೋಪಿಗಳು ಭಾಗಿಯಾಗಿದ್ದು, ಅದರಲ್ಲಿ ಐದು ಮಂದಿಯನ್ನು ಈ ಹಿಂದೆ ಬಂಧಿಸಲಾಗಿತ್ತು, ಬಳಿಕ ಪೊಲೀಸರು ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಕಿಂಗ್ ಪಿನ್ ತಲ್ಹತ್ ಗಾಗಿ ಶೋಧ ನಡೆಸುತ್ತಿದ್ದು, ನಿನ್ನೆ ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಂದರಿನ ಮೀನು ವ್ಯಾಪಾರಕ್ಕೆ ಸಂಬಂಧಿಸಿದಂತೆ ಈ ಕೊಲೆಯತ್ನ ನಡೆದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ, ಆಚಿ ,ನೌಫಾಲ್, ಅಶ್ಫಾಕ್, ನಿಸಾಕ್, ರಿಫತ್ ಆಲಿ, ರಹೀಮ್ ಎಂಬವರನ್ನು ಈ ಹಿಂದೆ ಬಂಧಿಸಲಾಗಿತ್ತು.ಇದೀಗ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಏಳು ಮಂದಿ ಶಾಮೀಲಾಗಿದ್ದಾರೆ ಎಂದು ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ.

Join Whatsapp