ಉಳ್ಳಾಲ: ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ಪ್ರಕರಣದ ಆರೋಪಿ ನೇಣಿಗೆ ಶರಣು

Prasthutha|

ಉಳ್ಳಾಲ: ಎರಡು ವರ್ಷದ ಹಿಂದೆ ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಗುರುತಿಸಲ್ಪಟ್ಟಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.

- Advertisement -


ಕುತ್ತಾರುವಿನ ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20) ಆತ್ಮ ಹತ್ಯೆಗೈದ ಯುವಕ.


ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ನಿನ್ನೆ ರಾತ್ರಿ 11 ರ ವೇಳೆ ಮನೆಗೆ ಬಂದಿದ್ದ ಯತಿರಾಜ್ ಚಿಕ್ಕಮ್ಮ ಮನೆಯಲ್ಲಿರದ ವೇಳೆ ನೇಣು ಬಿಗಿದಿದ್ದಾನೆ.

- Advertisement -


ಗುರುವಾರ ಬೆಳಗ್ಗೆ ಯತಿರಾಜ್ನ ಮಾವ ಹುಡುಕಾಡಿದಾಗ ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಮನೆಮಂದಿ ನೇಣು ಕುಣಿಕೆಯನ್ನು ಕತ್ತರಿಸಿದರೂ ಅದಾಗಲೇ ಯತಿರಾಜ್ ಮೃತಪಟ್ಟಿದ್ದ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.



Join Whatsapp