Home ಕರಾವಳಿ ಉಳ್ಳಾಲ | ನಿಂತಿದ್ದ ಲಾರಿಗೆ ಸ್ಕೂಟರ್’ಗಳ ಢಿಕ್ಕಿ: ಓರ್ವ ಸವಾರ ಮೃತ್ಯು

ಉಳ್ಳಾಲ | ನಿಂತಿದ್ದ ಲಾರಿಗೆ ಸ್ಕೂಟರ್’ಗಳ ಢಿಕ್ಕಿ: ಓರ್ವ ಸವಾರ ಮೃತ್ಯು

ಉಳ್ಳಾಲ: ಸೇತುವೆ ಮೇಲೆ ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್’ಗಳು ಡಿಕ್ಕಿ ಹೊಡೆದು ಓರ್ವ ಸವಾರ ಮೃತಪಟ್ಟಿರುವ ಘಟನೆ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಅಂಗರಗುಂಡಿ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಮುಹಮ್ಮದ್ ನೌಫಾಲ್ (26) ಮೃತಪಟ್ಟಿದ್ದಾರೆ. ಇನ್ನೊಂದು ಸ್ಕೂಟರಿನಲ್ಲಿದ್ದ ಗಾಯಾಳುಗಳ ವಿವರ ತಿಳಿದುಬಂದಿಲ್ಲ.

ಬೈಕಂಪಾಡಿ ಎಪಿಎಂಸಿಯಲ್ಲಿರುವ ಮಳಿಗೆಗೆ ತರಕಾರಿ ತರಲು ನೌಫಾಲ್ ಅವರು ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

 ಮರಣೋತ್ತರ ಪರೀಕ್ಷೆ ಬಳಿಕ ಮಂಗಳೂರು ಕೇಂದ್ರ ಜುಮಾ ಮಸೀದಿಯಲ್ಲಿ ಜನಾಝ ನಮಾಝ್ ನಿರ್ವಹಿಸಿದ ಬಳಿಕ ಪ್ರಾರ್ಥಿವ ಶರೀರವನ್ನು ಅಂಗರಗುಂಡಿಯ ಮನೆಗೆ ತಂದು ಅಂಗರಗುಂಡಿ ಖಬರಸ್ತಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ

 ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version