ಉಳ್ಳಾಲ: ವಿದ್ಯಾರ್ಥಿ ಆತ್ಮಹತ್ಯೆ

Prasthutha|

ಉಳ್ಳಾಲ: ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಪಾಡಿಯ ಕೆ.ಸಿ.ನಗರದಲ್ಲಿ ನಡೆದಿದೆ.

- Advertisement -

ಮುಹಮ್ಮದ್‌ ನುಮಾನ್ (19) ಆತ್ಮಹತ್ಯೆಗೈದ ಯುವಕ ಎಂದು ಗುರುತಿಸಲಾಗಿದೆ.

ನುಮಾನ್ ಮನೆಯ ಒಳಗಡೆ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮನೆಮಂದಿ ಬಾಗಿಲು ಒಡೆದು ನೋಡಿದಾಗ ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

- Advertisement -

ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಸ್ಪೀಕರ್ ಯು.ಟಿ.ಖಾದರ್ ಅವರು ಸಂತಾಪ ವ್ಯಕ್ತಪಡಿಸಿದ್ದು, ನನ್ನ ಕ್ಷೇತ್ರ ವ್ಯಾಪ್ತಿಯ ಕೆ ಸಿ ರೋಡ್ ನ ಫುಟ್ಬಾಲ್ ಆಟಗಾರ ಉತ್ತಮ ಗೋಲ್ ಕೀಪರ್ ನುಮಾನ್ ರವರು ನಿಧನರಾಗಿದ್ದು ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ.
ಅಲ್ಲಾಹ್ ಅವರ ಖಬರ್ ವಿಶಾಲವಾಗಿರಿಸಲಿ,ಮಗ್ಫಿರತ್ ನೀಡಿ ಕರುಣಿಸಲಿ,ಹಿತೈಷಿಗಳಿಗೆ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

Join Whatsapp