Home ಕರಾವಳಿ ಉಳ್ಳಾಲ: ವಿದ್ಯಾರ್ಥಿ ಆತ್ಮಹತ್ಯೆ

ಉಳ್ಳಾಲ: ವಿದ್ಯಾರ್ಥಿ ಆತ್ಮಹತ್ಯೆ

ಉಳ್ಳಾಲ: ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಪಾಡಿಯ ಕೆ.ಸಿ.ನಗರದಲ್ಲಿ ನಡೆದಿದೆ.

ಮುಹಮ್ಮದ್‌ ನುಮಾನ್ (19) ಆತ್ಮಹತ್ಯೆಗೈದ ಯುವಕ ಎಂದು ಗುರುತಿಸಲಾಗಿದೆ.

ನುಮಾನ್ ಮನೆಯ ಒಳಗಡೆ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮನೆಮಂದಿ ಬಾಗಿಲು ಒಡೆದು ನೋಡಿದಾಗ ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಸ್ಪೀಕರ್ ಯು.ಟಿ.ಖಾದರ್ ಅವರು ಸಂತಾಪ ವ್ಯಕ್ತಪಡಿಸಿದ್ದು, ನನ್ನ ಕ್ಷೇತ್ರ ವ್ಯಾಪ್ತಿಯ ಕೆ ಸಿ ರೋಡ್ ನ ಫುಟ್ಬಾಲ್ ಆಟಗಾರ ಉತ್ತಮ ಗೋಲ್ ಕೀಪರ್ ನುಮಾನ್ ರವರು ನಿಧನರಾಗಿದ್ದು ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ.
ಅಲ್ಲಾಹ್ ಅವರ ಖಬರ್ ವಿಶಾಲವಾಗಿರಿಸಲಿ,ಮಗ್ಫಿರತ್ ನೀಡಿ ಕರುಣಿಸಲಿ,ಹಿತೈಷಿಗಳಿಗೆ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

Join Whatsapp
Exit mobile version