ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದನ್ನು ಕೇಳಿ ಮೂಕನಾದೆ : ಬಿಜೆಪಿ ನಾಯಕಿ ಉಮಾಭಾರತಿ

Prasthutha|

► ರೈತರಿಗೆ ಅರಿವು ಮೂಡಿಸುವಲ್ಲಿ ಕಾರ್ಯಕರ್ತರು ಎಡವಿದ್ದಾರೆ

- Advertisement -

ಮಧ್ಯಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದನ್ನು ಕೇಳಿ ನಾನು ಮೂಕನಾದೆ ಎಂದು ಮಧ್ಯಪ್ರದೇಶದ ಮಾಜಿ ಸಿಎಂ ಮತ್ತು ಬಿಜೆಪಿಯ ಹಿರಿಯ ನಾಯಕಿ ಉಮಾಭಾರತಿ ತಮ್ಮದೇ ಸರಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ. ರೈತರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಾಗದೇ ಇರುವುದು ನಮ್ಮ ಕಾರ್ಯಕರ್ತರ ಕೊರತೆ ಎಂದು ಅವರು ಹೇಳಿದ್ದಾರೆ.

‘ನಾನು ಕಳೆದ 4 ದಿನಗಳಿಂದ ವಾರಣಾಸಿಯ ಗಂಗಾನದಿಯ ದಡದಲ್ಲಿದ್ದೇನೆ. 2021ರ ನವೆಂಬರ್ 19ರಂದು ನಮ್ಮ ಪ್ರಧಾನಿ ಮೋದಿ ಅವರು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದನ್ನು ಕೇಳಿ ಮೂಕನಾದೆ. ಹೀಗಾಗಿ ಮೂರು ದಿನಗಳ ಬಳಿಕ ಪ್ರತಿಕ್ರಿಯೆ ನೀಡುತ್ತಿದ್ದೇನೆ ಎಂದು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

- Advertisement -

ರೈತರಿಗೆ ಅರಿವು ಮೂಡಿಸುವಲ್ಲಿ ನಮ್ಮ ಕಾರ್ಯಕರ್ತರು ಎಡವಿದ್ದಾರೆ ಎಂದು ಹೇಳಿದ್ದಾರೆ. ಕಾನೂನು ವಾಪಸು ಕೊಡುವಾಗ ಪ್ರಧಾನಿ ಹೇಳಿದ್ದು ನನ್ನಂತಹವರಿಗೆ ಬೇಸರ ತಂದಿದೆ. ಕೃಷಿ ಕಾನೂನಿನ ಮಹತ್ವವನ್ನು ರೈತರಿಗೆ ವಿವರಿಸಲು ಪ್ರಧಾನಿಗೆ ಸಾಧ್ಯವಾಗದಿದ್ದರೆ ನಮ್ಮೆಲ್ಲರ ಕೊರತೆ ಬಿಜೆಪಿಗಿದೆ ಎಂದಿದ್ದಾರೆ.

ಪ್ರಧಾನಿ ಮೋದಿ ಅತ್ಯಂತ ಆಳವಾದ ಚಿಂತನೆ ಮತ್ತು ಸಮಸ್ಯೆಯ ಮೂಲವನ್ನು ಅರ್ಥಮಾಡಿಕೊಳ್ಳುವ ವ್ಯಕ್ತಿಯಾಗಿದ್ದಾರೆ. ಅವರು ಸಮಸ್ಯೆಯ ಮೂಲವನ್ನು ಅರ್ಥಮಾಡಿಕೊಳ್ಳುವವರು ಪರಿಹಾರವನ್ನು ಸಂಪೂರ್ಣವಾಗಿ ಪರಿಹರಿಸುತ್ತಾರೆ. ಮತ್ತು ‘ಕೃಷಿ ಕಾನೂನುಗಳ ಬಗ್ಗೆ ಪ್ರತಿಪಕ್ಷಗಳ ನಿರಂತರ ಅಪಪ್ರಚಾರವನ್ನು ನಾವು ಎದುರಿಸಲು ಸಾಧ್ಯವಾಗಲಿಲ್ಲ. ಆದ್ದರಿಂದಲೇ ಆ ದಿನದ ಪ್ರಧಾನಿ ಭಾಷಣದಿಂದ ನಾನು ತುಂಬಾ ಅಸಮಾಧಾನಗೊಂಡಿದ್ದೇನೆ ಎಂದಿದ್ದಾರೆ.

Join Whatsapp