ಸಾಲ ಬಾಧೆ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು

Prasthutha|

ತುಮಕೂರು: ಸಾಲ ಬಾಧೆ ತಾಳಲಾರದೆ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವರಾಯನ ದುರ್ಗದ ಪ್ರವಾಸಿ ಮಂದಿರದಲ್ಲಿ ನಡೆದಿದೆ.

- Advertisement -


ಮೃತ ವ್ಯಕ್ತಿಯನ್ನು ಸಪ್ತಗಿರಿ ಬಡಾವಣೆ ಮೂಲದ ಟಿ.ಎನ್ ಪ್ರಸಾದ್ (50) ಎಂದು ಗುರುತಿಸಲಾಗಿದೆ. ಪಿಡಬ್ಲ್ಯೂಡಿ ಇಲಾಖೆಯ ಸಿವಿಲ್ ಕಂಟ್ರಾಕ್ಟರ್ ಆಗಿ ಪ್ರಸಾದ್ ಕೆಲಸ ನಿರ್ವಹಿಸುತ್ತಿದ್ದರು.


ಘಟನೆ ಕುರಿತು ಮಾತನಾಡಿರುವ ತುಮಕೂರು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಲರಾಮ್, ಮೃತ ಪ್ರಸಾದ್ ಸಾಲದ ಸುಳಿಯಲ್ಲಿ ಸಿಲುಕಿದ್ದರು. ಸಾಲದ ಒತ್ತಡ ಜಾಸ್ತಿಯಾಗಿದ್ದು, ಕೆಲಸ ನಿರ್ವಹಿಸಿದ್ದ ಬಿಲ್ ಗಳು ಸಹ ಪಾವತಿ ಆಗಿರಲಿಲ್ಲ. ಅಲ್ಲದೆ, ಇತ್ತೀಚೆಗೆ ತಾನು ವಾಸವಾಗಿದ್ದ ಮನೆಯನ್ನು ಸಹ ಮಾರಾಟ ಮಾಡಿದ್ದಾರೆ. ರಾಜ್ಯದ ಭ್ರಷ್ಟ ಆಡಳಿತ ಹಾಗೂ ರಾಜಕಾರಣಿಗಳ ವ್ಯವಸ್ಥೆ ಈ ಸಾವಿಗೆ ಕಾರಣ ಎಂದು ಆರೋಪಿಸಿದರು.

Join Whatsapp