ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಂಗ ಬಂಧನ

Prasthutha|

ಕೊಚ್ಚಿ : ಕಳೆದ  2018 ರ ಬ್ಯೂಟಿ ಪಾರ್ಲರ್ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ರವಿ ಪೂಜಾರಿಯನ್ನು ಜೂ. 22 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೊಚ್ಚಿಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ಹೊರಡಿಸಿದೆ.

- Advertisement -

ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡು ಬೆಂಗಳೂರು ನಗರ ಪೊಲೀಸರಿಂದ ಬಂಧನಕ್ಕೊಳಗಾಗಿ ಪರಪ್ಪನ‌ ಅಗ್ರಹಾರ ಜೈಲಿನಲ್ಲಿದ್ದ ಪಾತಕಿ ರವಿ ಪೂಜಾರಿಯನ್ನು ಕೇರಳ ಪೊಲೀಸರು 8 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದರು.

ಕಳೆದ 2018 ರಲ್ಲಿ ಎರ್ನಾಕುಲಂನ ಕಡವಂತರದಲ್ಲಿರುವ ನಟಿ ಲೀನಾ ಮಾರಿಯಾ ಪೌಲ್ ಒಡೆತನದ ಬ್ಯೂಟಿಪಾರ್ಲರ್‌ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿನ್ ವರ್ಗೀಸ್ ಮತ್ತು ಬಿಲಾಲ್ ಎಂಬ ಆರೋಪಿಗಳನ್ನು ಬಂಧಿಸಲಾಗಿತ್ತು.

- Advertisement -

ಆರೋಪಿಗಳು ಪಾತಕಿ ರವಿ ಪೂಜಾರಿ ಸಹಚರರು ಎನ್ನಲಾಗಿದ್ದು ಈ ಸಂಬಂಧ ಬೆಂಗಳೂರಿಗೆ ಆಗಮಿಸಿದ್ದ ಕೇರಳ ಪೊಲೀಸರು ಬಾಡಿವಾರೆಂಟ್ ಮೇಲೆ 8 ದಿನಗಳ ಕಾಲ ರವಿ ಪೂಜಾರಿಯನ್ನು ವಶಕ್ಕೆ ಪಡೆದುಕೊಂಡು ಪರಪ್ಪನ ಅಗ್ರಹಾರ ಜೈಲಿನಿಂದ ಕರೆದೊಯ್ದಿದ್ದರು.

ಎರಡು ದಶಕಗಳ ಹಿಂದೆ ದೇಶ ಬಿಟ್ಟು ಪರಾರಿಯಾಗಿದ್ದ ಈತನ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ನಡುವೆ ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ 2019 ಜ.19 ರಂದು ಸೆನೆಗಲ್ ಪೊಲೀಸರು ಬಂಧಿಸಿದ್ದರು.

ಆದರೆ ಭಾರತಕ್ಕೆ ಆರೋಪಿಯನ್ನು ಹಸ್ತಾಂತರಿಸಲು ಕಾನೂನು‌ ಸಮಸ್ಯೆ ಎದುರಾಗಿತ್ತು. ಅಂತಿಮವಾಗಿ ಕಾನೂನು ಹೋರಾಟ ಪ್ರಕ್ರಿಯೆ ಮುಗಿಸಿಕೊಂಡು ದೇಶಕ್ಕೆ ಕರೆತರುವಲ್ಲಿ ರಾಜ್ಯ ಪೊಲೀಸರು ಯಶಸ್ವಿಯಾಗಿದ್ದರು.

Join Whatsapp