ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ: ಪ್ರಣಾಳಿಕೆಯಲ್ಲಿ ಬಿಜೆಪಿ ಭರವಸೆ

Prasthutha|

ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲು ರಣತಂತ್ರ ರೂಪಿಸಿರುವ ಬಿಜೆಪಿ ಯುವಕರು, ರೈತಾಪಿ ವರ್ಗದವರು ಹಾಗೂ ಮಧ್ಯಮ ವರ್ಗದವರನ್ನು ಸೆಳೆಯಲು ಮುಂದಾಗಿದ್ದು, ಏಕರೂಪ ನೀತಿ ಸಂಹಿತೆ ಜಾರಿಯ ಭರವಸೆ ನೀಡಿದೆ.

- Advertisement -

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬೆಂಗಳೂರಿನಲ್ಲಿಂದು ಪಕ್ಷದ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಪ್ರತಿದಿನ ಬಿಪಿಎಲ್ ಕಾರ್ಡ್ ದಾರರಿಗೆ ಅರ್ಧ ಲೀಟರ್ ಹಾಲು ಉಚಿತವಾಗಿ ನೀಡಲಾಗುವುದು. ಬಿಪಿಎಲ್ ಕಾರ್ಡ್‌ದಾರರಿಗೆ ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ  3 ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಪ್ರಕಟಿಸಿದೆ.

ಪ್ರತಿ ತಿಂಗಳು 5 ಕೆಜಿ ಅಕ್ಕಿ ಜೊತೆಗೆ 5ಕೆಜಿ ಸಿರಿಧಾನ್ಯ, ಯುಗಾದಿ, ಗಣೇಶ ಚತುರ್ಥಿ ಹಾಗೂ ದೀಪಾವಳಿ ಹಬ್ಬಕ್ಕೆ ಉಚಿತ ಸಿಲಿಂಡರ್‌ಗಳ ಜೊತೆಗೆ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ  ಏಕರೂಪ ಸಂಹಿತೆಯನ್ನು ಜಾರಿಗೆ ತರುವುದಾಗಿ ಹೇಳಿದೆ.

- Advertisement -

 ಸರ್ವರಿಗೂ ಸೂರು ಯೋಜನೆ ಕಲ್ಪಿಸಲು ಮುಂದಾಗಿದ್ದು, ಗ್ರಾಮೀಣ ಭಾಗದಲ್ಲಿ 10 ಲಕ್ಷ ಮನೆ ನಿರ್ಮಾಣಕ್ಕೆ ಭರವಸೆ ನೀಡಿದೆ, 1 ಮನೆ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಬಿಜೆಪಿ ಪ್ರಕಟಿಸಿದೆ.

ಬಹುಮಹಡಿ ಯೋಜನೆಯಡಿ 5 ಲಕ್ಷ ಮನೆ ಪೋಷಣೆ ಯೋಜನೆಯಡಿ ಹಾಲು, ಪಡಿತರ ಕಿಟ್ ವಿತರಣೆ ಒದಗಿಸಲು ಮುಂದಾಗಿದ್ದು, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ವಸ್ತುಗಳ ಮಾರಾಟ ಮಾಡುವುದಾಗಿ ಆಶ್ವಾಸನೆ ನೀಡಲಾಗಿದೆ.



Join Whatsapp