Home Uncategorized ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆ ನೀಡಲಿ: ಸಂತೋಷ್ ಲಾಡ್

ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆ ನೀಡಲಿ: ಸಂತೋಷ್ ಲಾಡ್

ಬೆಂಗಳೂರು: ಬೆಂಗಳೂರಿನ ಗಂಗೇನಹಳ್ಳಿಯ ಜಮೀನು ಡಿನೋಟಿಫಿಕೇಶನ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗ್ರಹಿಸಿದ್ದಾರೆ.


ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಕೃಷ್ಣ ಬೈರೇಗೌಡ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಸಂತೋಷ್ ಲಾಡ್ ಮಾತನಾಡಿದರು.


ಅಕ್ರಮ ಸಂಬಂಧ ಎಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡಿದರು.


ಡಿನೋಟಿಫಿಕೇಶನ್ ಮಾಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದರೂ ಕಾನೂನು ತಜ್ಞರ ಅಭಿಪ್ರಾಯ ಪಡೆಯದೇ ಡಿನೋಟಿಫಿಕೇಶನ್ ಮಾಡಲು ಆದೇಶ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರ ಪಾಲುದಾರಿಕೆಯಲ್ಲಿ ಇದೆಲ್ಲ ನಡೆದಿದೆ ಕುಮಾರಸ್ವಾಮಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಆಗ್ರಹಿಸಿದರು.


ನೈತಿಕತೆಯ ವಿಷಯ ಬಂದಾಗ ಕುಮಾರಸ್ವಾಮಿ ಅವರು ದೊಡ್ಡ ದೊಡ್ಡ ಮಾತುಗಳನ್ನಾಡುತ್ತಾರೆ. ದಿನಾ ಬೆಳಗ್ಗೆ ನೈತಿಕತೆ ಬಗ್ಗೆ ಪಾಠ ಮಾಡುವ ಅವರದು ಈಗ ಯಾವ ನಿಲುವು. ಇಬ್ಬರೂ ಸಹಿ ಮಾಡಿದ್ದಾರೆ. ಈಗ ಬೇಕಾದರೆ ಅವರು ನನಗೆ ನೆನಪಿಲ್ಲ ನಾನು ಸಹಿ ಮಾಡಿಲ್ಲ ಎಂದು ಹೇಳಬಹುದು ಎಂದು ಹೇಳಬಹುದು ಎಂದರು. ಈ ಪ್ರಕರಣದಲ್ಲಿ ಯಡಿಯೂರಪ್ಪ ಅವರೂ ಉತ್ತರ ನೀಡಬೇಕು. ಈಗ ನಿಮ್ಮದೇ ರಾಜ್ಯಪಾಲರು ಇದ್ದಾರೆ. ಅವರಿಗೆ ಹೇಳಿ ತನಿಖೆ ಮಾಡಿಸಿ ರಾಷ್ಟ್ರಪತಿಗಳೂ ಸಹ ಮಧ್ಯಪ್ರವೇಶಿಸಲಿ ಎಂದು ಒತ್ತಾಯಿಸಿದರು.

Join Whatsapp
Exit mobile version