ರಾಜೀನಾಮೆ ನೀಡಲು ನಿರಾಕರಿಸಿದ ವಿವಿ ಕುಲಪತಿಗಳು: ಶೋಕಾಸ್ ನೋಟಿಸ್ ಜಾರಿ ಮಾಡಿದ ಕೇರಳ ರಾಜ್ಯಪಾಲ

Prasthutha|

ತಿರುವನಂತಪುರ: ತಮ್ಮ ಸೂಚನೆಯ ಹೊರತಾಗಿಯೂ ಒಂಭತ್ತು ವಿಶ್ವವಿದ್ಯಾಲಯಗಳ ಕುಲಪತಿಗಳು ರಾಜೀನಾಮೆ ನೀಡಲು ನಿರಾಕರಿಸಿದ್ದರಿಂದ ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಸೋಮವಾರ ಅವರೆಲ್ಲರಿಗೂ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

- Advertisement -

ರಾಜ್ಯದ ಒಂಬತ್ತು ವಿಶ್ವವಿದ್ಯಾಲಯಗಳ ಉಪಕುಲಪತಿಗಳು ರಾಜೀನಾಮೆ ನೀಡುವಂತೆ ರಾಜ್ಯಪಾಲ ಆರೀಫ್ ಮುಹಮ್ಮದ್ ಖಾನ್ ಸೂಚಿಸಿದ್ದರು. ಸೋಮವಾರ ಬೆಳಗ್ಗೆ 11.30ರೊಳಗೆ 9 ಮಂದಿ ಕುಲಪತಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸೂಚಿಸಿದ್ದರು. ಆದರೆ ಕುಲಪತಿಗಳು ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆರಿಫ್ ಖಾನ್, ನೋಟಿಸ್ ಜಾರಿ ಮಾಡಿ, ನವೆಂಬರ್ 3ರೊಳಗೆ ನೋಟಿಸ್ ಗೆ ಉತ್ತರಿಸುವಂತೆ ಸೂಚಿಸಿದ್ದಾರೆ.



Join Whatsapp