Home ಟಾಪ್ ಸುದ್ದಿಗಳು ರಾಜೀನಾಮೆ ನೀಡಲು ನಿರಾಕರಿಸಿದ ವಿವಿ ಕುಲಪತಿಗಳು: ಶೋಕಾಸ್ ನೋಟಿಸ್ ಜಾರಿ ಮಾಡಿದ ಕೇರಳ ರಾಜ್ಯಪಾಲ

ರಾಜೀನಾಮೆ ನೀಡಲು ನಿರಾಕರಿಸಿದ ವಿವಿ ಕುಲಪತಿಗಳು: ಶೋಕಾಸ್ ನೋಟಿಸ್ ಜಾರಿ ಮಾಡಿದ ಕೇರಳ ರಾಜ್ಯಪಾಲ

ತಿರುವನಂತಪುರ: ತಮ್ಮ ಸೂಚನೆಯ ಹೊರತಾಗಿಯೂ ಒಂಭತ್ತು ವಿಶ್ವವಿದ್ಯಾಲಯಗಳ ಕುಲಪತಿಗಳು ರಾಜೀನಾಮೆ ನೀಡಲು ನಿರಾಕರಿಸಿದ್ದರಿಂದ ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಸೋಮವಾರ ಅವರೆಲ್ಲರಿಗೂ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ರಾಜ್ಯದ ಒಂಬತ್ತು ವಿಶ್ವವಿದ್ಯಾಲಯಗಳ ಉಪಕುಲಪತಿಗಳು ರಾಜೀನಾಮೆ ನೀಡುವಂತೆ ರಾಜ್ಯಪಾಲ ಆರೀಫ್ ಮುಹಮ್ಮದ್ ಖಾನ್ ಸೂಚಿಸಿದ್ದರು. ಸೋಮವಾರ ಬೆಳಗ್ಗೆ 11.30ರೊಳಗೆ 9 ಮಂದಿ ಕುಲಪತಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸೂಚಿಸಿದ್ದರು. ಆದರೆ ಕುಲಪತಿಗಳು ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆರಿಫ್ ಖಾನ್, ನೋಟಿಸ್ ಜಾರಿ ಮಾಡಿ, ನವೆಂಬರ್ 3ರೊಳಗೆ ನೋಟಿಸ್ ಗೆ ಉತ್ತರಿಸುವಂತೆ ಸೂಚಿಸಿದ್ದಾರೆ.

Join Whatsapp
Exit mobile version