Home ಕರಾವಳಿ ದಕ್ಷಿಣ ಕನ್ನಡ| ನಾಳೆಯಿಂದ ಮಧ್ಯಾಹ್ನ 2 ರವರೆಗೆ ಎಲ್ಲಾ ಅಂಗಡಿ ತೆರೆಯಲು ಅವಕಾಶ

ದಕ್ಷಿಣ ಕನ್ನಡ| ನಾಳೆಯಿಂದ ಮಧ್ಯಾಹ್ನ 2 ರವರೆಗೆ ಎಲ್ಲಾ ಅಂಗಡಿ ತೆರೆಯಲು ಅವಕಾಶ

ದಕ್ಷಿಣ ಕನ್ನಡ : ವ್ಯಾಪಾರಸ್ಥರ ಬೇಡಿಕೆ ಹಿನ್ನೆಲೆಯಲ್ಲಿ ಬುಧವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.


ಜವಳಿ ವ್ಯಾಪಾರಸ್ಥರು, ಸೇರಿದಂತೆ ವಿವಿಧ ವ್ಯಾಪಾರಸ್ಥರು ಲಾಕ್ ಡೌನ್ ನಿಂದ ನಮ್ಮ ಬದುಕು ಕಟ್ಟಿಕೊಳ್ಳಲು ಕಷ್ಟವಾಗಿದೆ ಎಂದು ಅಹವಾಲು ತೋಡಿಕೊಂಡಿದ್ದರು. ಈ ಬಗ್ಗೆ ಸಂಸದರು, ಜಿಲ್ಲೆಯ ಶಾಸಕರ ಅಭಿಪ್ರಾಯ ಪಡೆದು ಈ ನಿರ್ಧಾರ ಕೈಗೊಳ್ಳಲಾಗಿದೆ. ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಜನರು ಜಿಲ್ಲಾಡಳಿತದೊಂದಿಗೆ ಸಹಕರಿಸಿ ಪಾಸಿಟಿವಿಟಿ ರೇಟ್ ಕಡಿಮೆ ಮಾಡಲು ಸಹಕಾರ ನೀಡಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸಚಿವರು ತಿಳಿಸಿದರು.

Join Whatsapp
Exit mobile version