ಅವೈಜ್ಞಾನಿಕ ಚರಂಡಿ ಕಾಮಗಾರಿ: ಜಲಾವೃತಗೊಂಡ ಕಲ್ಲಾಪು

Prasthutha|

ತೊಕೊಟ್ಟು: ಉಳ್ಳಾಲ ನಗರಸಭೆ ವ್ಯಾಪ್ತಿಗೊಳಪಟ್ಟ ಕಲ್ಲಾಪುವಿನಲ್ಲಿ ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದಾಗಿ ಇಲ್ಲಿನ ಹಲವು ಪ್ರದೇಶ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನರು ಪರದಾಡುವಂತಾಗಿದೆ

- Advertisement -

ಕಳೆದ ಹಲವು ವರ್ಷಗಳಿಂದ ಇಲ್ಲಿನ ಚರಂಡಿಯನ್ನು ದುರಸ್ತಿ ಮಾಡದ ಕಾರಣ ಪ್ರತಿ ವರ್ಷ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ಕೃತಕ ನೆರೆಯ ಪರಿಸ್ಥಿತಿ ನಿರ್ಮಾಣವಾಗುತ್ತಲೇ ಇದೆ. ಸಾಕಷ್ಟು ಬಾರಿ ಸಾರ್ವಜನಿಕರು ಸ್ಥಳೀಯಾಡಳಿತಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಜನರ ಗೋಳು.

ಕೆರೆಬೈಲ್ ವಾರ್ಡ್ ಕೌನ್ಸಿಲರ್ ಜನರ ಸಂಕಷ್ಟಕ್ಕೆ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

Join Whatsapp