Home ಕರಾವಳಿ ಅವೈಜ್ಞಾನಿಕ ಚರಂಡಿ ಕಾಮಗಾರಿ: ಜಲಾವೃತಗೊಂಡ ಕಲ್ಲಾಪು

ಅವೈಜ್ಞಾನಿಕ ಚರಂಡಿ ಕಾಮಗಾರಿ: ಜಲಾವೃತಗೊಂಡ ಕಲ್ಲಾಪು

ತೊಕೊಟ್ಟು: ಉಳ್ಳಾಲ ನಗರಸಭೆ ವ್ಯಾಪ್ತಿಗೊಳಪಟ್ಟ ಕಲ್ಲಾಪುವಿನಲ್ಲಿ ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದಾಗಿ ಇಲ್ಲಿನ ಹಲವು ಪ್ರದೇಶ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನರು ಪರದಾಡುವಂತಾಗಿದೆ

ಕಳೆದ ಹಲವು ವರ್ಷಗಳಿಂದ ಇಲ್ಲಿನ ಚರಂಡಿಯನ್ನು ದುರಸ್ತಿ ಮಾಡದ ಕಾರಣ ಪ್ರತಿ ವರ್ಷ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ಕೃತಕ ನೆರೆಯ ಪರಿಸ್ಥಿತಿ ನಿರ್ಮಾಣವಾಗುತ್ತಲೇ ಇದೆ. ಸಾಕಷ್ಟು ಬಾರಿ ಸಾರ್ವಜನಿಕರು ಸ್ಥಳೀಯಾಡಳಿತಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಜನರ ಗೋಳು.

ಕೆರೆಬೈಲ್ ವಾರ್ಡ್ ಕೌನ್ಸಿಲರ್ ಜನರ ಸಂಕಷ್ಟಕ್ಕೆ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

Join Whatsapp
Exit mobile version