ಉತ್ತರ ಪ್ರದೇಶ: ಪೊಲೀಸ್ ಚಿತ್ರಹಿಂಸೆಗೆ ಅಪ್ರಾಪ್ತ ಬಾಲಕ ಬಲಿ

Prasthutha|

ಆಗ್ರಾ: ಮೊಬೈಲ್ ಕಳ್ಳತನದ ಶಂಕೆಯಲ್ಲಿ 17 ಹರೆಯದ ಬಾಲಕನ ಮೇಲೆ ಆತನ ಚಿಕ್ಕಪ್ಪ ಮತ್ತು ಮೂವರು ಪೊಲೀಸರು ಗಂಭೀರವಾಗಿ ಹಲ್ಲೆ ನಡೆಸಿದ ಪರಿಣಾಮ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಲಖಿಂಪುರದಲ್ಲಿ ನಡೆದಿದೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಹೊರ ಠಾಣೆಯ ಉಸ್ತುವಾರಿ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಈ ದುಷ್ಕೃತ್ಯದಲ್ಲಿ ಪೊಲೀಸರು ನೇರವಾಗಿ ಶಾಮೀಲಾಗಿದ್ದಾರೆ ಎಂದು ಬಾಲಕನ ಕುಟುಂಬ ಆರೋಪಿಸಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಲಖಿಂಪುರ ಎಸ್.ಎಸ್.ಪಿ ಸಂಜೀವ್ ಸುಮನ್, ಪೊಲೀಸರ ವಿರುದ್ಧದ ದೂರಿನ ಬಗ್ಗೆ ತನಿಖೆ ಕೈಗೊಂಡಿದ್ದೇವೆ. ತಪ್ಪಿತಸ್ಥ ಅಧಿಕಾರಿಗಳು ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

- Advertisement -

ಮರಣೋತ್ತರ ಪರೀಕ್ಷೆಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ಎಂದು ಹಿರಿಯ ಅಧಿಕಾರಿ ಸಂಜಯ್ ನಾಥ್ ತಿವಾರಿ ತಿಳಿಸಿದ್ದಾರೆ.

Join Whatsapp