ಉತ್ತರ ಪ್ರದೇಶ: ಮೊದಲ ಬಾರಿಗೆ ಅಖಿಲೇಶ್ ಯಾದವ್ ಕರ್ಹಾಲ್ ನಿಂದ ಸ್ಪರ್ಧೆ

Prasthutha|

ಲಕ್ನೋ: ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಇದೇ ಮೊದಲ ಬಾರಿಗೆ ಮೈನ್ ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

- Advertisement -

ಸಮಾಜವಾದಿ ಪಕ್ಷದ ಭದ್ರಕೋಟೆಯಾದ ಕರ್ಹಾಲ್ ಕ್ಷೇತ್ರದಲ್ಲಿ 1993 ರ ಬಳಿಕ ಪ್ರತಿ ಚುನಾವಣೆಯಲ್ಲಿ ಮತದಾರರು ಎಸ್ಪಿ ಅಭ್ಯರ್ಥಿಗಳಿಗೆ ಮತ ಹಾಕುತ್ತಲೇ ಬಂದಿದ್ದಾರೆ. 2002 ರಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿಯಾಗಿ ಜಯಗಳಿಸಿತ್ತು.

ಅಖಿಲೇಶ್ ಯಾದವ್ ಅವರ ತಂದೆ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ಐದು ಬಾರಿ ಸಂಸತ್ತಿದೆ ಆಯ್ಕೆ ಮಾಡಿದ ಮೈನ್ ಪುರಿ ಲೋಕಸಭಾ ಕ್ಷೇತ್ರದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕರ್ಹಾಲ್ ಕೂಡ ಒಂದಾಗಿದೆ.

Join Whatsapp