ಆರೆಸ್ಸೆಸ್ ವಿರುದ್ಧ ಕಮೆಂಟ್: ಸಲ್ಮಾನ್ ಖುರ್ಷಿದ್ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

Prasthutha|

ಲಕ್ನೋ: ಆರೆಸ್ಸೆಸ್ ಅನ್ನು ಐಸಿಸ್ ಗೆ ಹೋಲಿಕೆ ಮಾಡಿ ತನ್ನ ಪುಸ್ತಕದಲ್ಲಿ ಬರೆದ ಹಿರಿಯ ವಕೀಲ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ವಿರುದ್ಧ ಪ್ರಕರಣ ದಾಖಲಿಸಲು ಉತ್ತರ ಪ್ರದೇಶ ನ್ಯಾಯಾಲಯ ಇಂದು ಪೊಲೀಸರಿಗೆ ನಿರ್ದೇಶನ ನೀಡಿದೆ.

- Advertisement -

ಶುಭಾಂಗಿ ತಿವಾರಿ ಎಂಬಾತ ಲಕ್ನೋ ನ್ಯಾಯಾಲಯಕ್ಕೆ ಸಲ್ಲಿಸಿದ ದೂರಿನ ಅನ್ವಯ CrPC 156 (3) ಅಡಿಯಲ್ಲಿ ಪಕರಣ ದಾಖಲಿಸಲು ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಶಾಂತನು ತ್ಯಾಗಿ ಅವರು ಬಕ್ಷಿ ಕಾ ತಾಲಾಬ್ ಪೊಲೀಸ್ ಠಾಣೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತಂದಿದ್ದಾರೆ ಎಂದು ತನ್ನ ದೂರಿನಲ್ಲಿ ಆರೋಪಿಸಲಾಗಿತ್ತು.

ಮಾತ್ರವಲ್ಲ ಮೂರು ದಿನಗಳಲ್ಲಿ ಎಫ್.ಐ.ಆರ್ ಪ್ರತಿಯನ್ನು ನ್ಯಾಯಾಲಯಕ್ಕೆ ಕಳುಹಿಸುವಂತೆಯೂ ಮ್ಯಾಜಿಸ್ಟ್ರೇಟ್ ಆದೇಶಿಸಿದ್ದಾರೆ

Join Whatsapp