ಕೇರಳದಲ್ಲಿ ಕ್ಯಾಂಪಸ್ ಫ್ರಂಟ್ ರಾಜಭವನ ರ‍್ಯಾಲಿ| ಉತ್ತರಪ್ರದೇಶದಲ್ಲಿ ಪ್ರಕರಣ ದಾಖಲಿಸಿದ ಆದಿತ್ಯನಾಥ್ ಪೊಲೀಸರು!

Prasthutha|

ತಿರುವನಂತಪುರಂ: ಕ್ಯಾಂಪಸ್ ಫ್ರಂಟ್ ನಾಯಕ ರವೂಫ್ ಷರೀಫ್ ಮತ್ತು ಇತರರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ತಿರುವನಂತಪುರಂ ರಾಜಭವನಕ್ಕೆ CFI ನಡೆಸಿದ ರ್ಯಾಲಿ ವಿರುದ್ಧ ಉತ್ತರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವೇಷಧಾರಿ ವ್ಯಕ್ತಿಯೊಬ್ಬನನ್ನು ಎಳೆದೊಯ್ಯುತ್ತಾ ಹಲ್ಲೆ ನಡೆಸುವ ವಿನೂತನ ಪ್ರತಿಭಟನೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರತಿಭಟನೆಯ ವಿಡಿಯೋ ಟ್ವಿಟರ್‌ನಲ್ಲಿ ವೈರಲ್ ಆಗಿದ್ದು, ಲಕ್ನೋದ ಇಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
ಲಕ್ನೋ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

ವೀಡಿಯೋ ವೀಕ್ಷಿಸಿ….

https://twitter.com/_TheBite/status/1452813864723116032

ಕೋಮು ವೈಷಮ್ಯ ಸೃಷ್ಟಿಸಲು ಯತ್ನ ಸೇರಿದಂತೆ ವಿವಿಧ ಪ್ರಕರಣ ದಾಖಲಾಗಿದೆ. ಕ್ಯಾಂಪಸ್ ಫ್ರಂಟ್ ಮಾರ್ಚ್ ಬಗ್ಗೆ ಆರೆಸ್ಸೆಸ್ ಪರ ಮಾಧ್ಯಮಗಳು ಟೀಕಿಸಿದ್ದವು.
ಕೇರಳದಲ್ಲಿ ಘಟನೆ ನಡೆದಿರುವುದರಿಂದ ಉತ್ತರಪ್ರದೇಶ ಪೊಲೀಸರಿಗೆ ನೇರವಾಗಿ ಪ್ರಕರಣ ದಾಖಲಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಕೋಮು ವೈಷಮ್ಯ ಸೃಷ್ಟಿಸಲು ಯತ್ನಿಸಿದ ಆರೋಪದ ಮೇಲೆ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp