ಕಾವೇರುತ್ತಿರುವ ಉ.ಪ್ರ ಚುನಾವಣೆ: ಬಿಜೆಪಿ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರಿದ ಬಿಲ್ಸಿ ಶಾಸಕ ರಾಧಾಕೃಷ್ಣ

Prasthutha|

ಲಕ್ನೋ: ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮೊದಲು ಬಿಜೆಪಿಯ ಬಿಲ್ಸಿ ಶಾಸಕ ರಾಧಾಕೃಷ್ಣ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರ್ಪಡೆಯಾಗಿದ್ದಾರೆ.

- Advertisement -

ಉತ್ತರ ಪ್ರದೇಶದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಧಕೃಷ್ಣ ಅವರು ಎಂಬತ್ತೆರಡೂ ಸಾವಿರಕ್ಕೂ ಅಧಿಕ ಮತಗಳನ್ನು ಪಡೆದಿದ್ದರೆ, ಬಿಎಸ್ಪಿ ಮತ್ತು ಎಸ್ಪಿ ಅಭ್ಯರ್ಥಿಗಳು ಕ್ರಮವಾಗಿ 55,091 ಮತ್ತು 50, 848 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಈ ಮಧ್ಯೆ ಬಹ್ರೈಚ್ ಜಿಲ್ಲೆಯ ನಾನ್ ಪಾರದಿಂದ ಬಿಜೆಪಿ ಶಾಸಕಿ ಮಾಧುರಿ ವರ್ಮಾ ಕೂಡ ಎಸ್ಪಿಗೆ ಸೇರಿದ್ದರಿಂದ ಬಿಜೆಪಿ ಪಕ್ಷಕ್ಕೆ ಎರಡನೇ ಆಘಾತವಾಗಿದೆ. ಮುಂಬರುವ ಚುನಾವಣೆಗೂ ಮುನ್ನ ಬಿಜೆಪಿಯ ಇನ್ನಷ್ಟು ಮುಖಂಡರು ಎಸ್ಪಿ ಪಕ್ಷ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಸ್ಪಿ ಗೆಲುವು ಸಾಧಿಸುವ ವಿಶ್ವಾಸವಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಜನವಿರೋಧಿ ಧೋರಣೆಗೆ ಸಾರ್ವಜನಿಕರು ಬೇಸತ್ತಿದ್ದಾರೆ ಎಂದು ತಿಳಿಸಿದರು.

Join Whatsapp