ಉತ್ತರ ಪ್ರದೇಶ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ದಲಿತ ಯುವತಿ ಮೃತ್ಯು

Prasthutha|

ಹೊಸದಿಲ್ಲಿ: ನಾಲ್ವರು ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದಿಲ್ಲಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19ರ ಹರೆಯದ ದಲಿತ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಯುವತಿ ಸೆ.14ರಂದು ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದು, ಘಟನೆಯ ಸುಮಾರು ಎರಡು ವಾರಗಳ ಬಳಿಕ ಮಹಿಳೆ ಸಾವನ್ನಪ್ಪಿದ್ದಾಳೆ.

- Advertisement -

ಆಕೆಯನ್ನು ದಿಲ್ಲಿ ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಹಿಂದೆ ಯುವತಿಯನ್ನು ಅಲಿಘಡ್ ನ ಜೆ.ಎನ್.ವೈದ್ಯಕೀಯ ಕಾಲೇಜಿಗೆ ಸೇರಿಸಲಾಗಿತ್ತು.

ಸಾಮೂಹಿಕ ಅತ್ಯಾಚಾರದ ಎಲ್ಲಾ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಸಂದೀಪ್, ರಾಮು, ಲವಕುಶ್ ಮತ್ತು ರವಿ ಎಂದು ಯುವತಿ ಗುರುತಿಸಿದ್ದಳು.

- Advertisement -

ಯುವತಿಯನ್ನು ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿರುವುದಲ್ಲದೆ ಕತ್ತು ಹಿಸುಕಲಾಗಿತ್ತು. ಆಕೆಯ ನಾಲಗೆ ಗಂಭೀರವಾಗಿ ಮುರಿತಕ್ಕೊಳಗಾಗಿರುವುದು ಕತ್ತು ಹಿಸುಕಲು ಪ್ರಯತ್ನ ನಡೆದಿರುವುದನ್ನು ಸೂಚಿಸುತ್ತದೆ ಎಂದು ಹತ್ರಾಸ್ ನ ಎಸ್.ಪಿ ವಿಕ್ರಾಂತ್ ವೀರ್ ಹೇಳಿದ್ದಾರೆ.

Join Whatsapp