ಉಪ್ಪಳ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಲಾರಿ ಡಿಕ್ಕಿ, 20 ಮಂದಿಗೆ ಗಾಯ

Prasthutha|

ಉಪ್ಪಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಉಪ್ಪಳ ಗೇಟ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.

- Advertisement -

ಕಾಞಂಗಾಡ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೊಹಿನೂರ್ ಸಂಸ್ಥೆಗೆ ಸೇರಿದ ಬಸ್‌ ಗೆ, ಮಂಗಳೂರಿನಿಂದ ಕೊಚ್ಚಿಗೆ ಹೋಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ  ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. 

ಬಸ್ಸಿನಲ್ಲಿ  ಮಹಿಳೆಯರು ಮತ್ತು ಮಕ್ಕಳು  ಹೆಚ್ಚಾಗಿ ಪ್ರಯಾಣಿಸುತ್ತಿದ್ದರು. ಮಾಹಿತಿ ತಿಳಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರ ಸಹಯಾದೊಂದಿಗೆ  ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ

Join Whatsapp