ಉಪ್ಪಿನಂಗಡಿ: ಬಸ್ ನಿಲ್ದಾಣದಲ್ಲೇ ವ್ಯಕ್ತಿ ಆತ್ಮಹತ್ಯೆ!

Prasthutha|

ಉಪ್ಪಿನಂಗಡಿ: ವ್ಯಕ್ತಿಯೊಬ್ಬರು ಬಸ್ ನಿಲ್ದಾಣದಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ನಡೆದಿದೆ.

- Advertisement -


ಮೃತಪಟ್ಟ ವ್ಯಕ್ತಿಯನ್ನು ಬಜತ್ತೂರು ಗ್ರಾಮದ ನಿವಾಸಿ ರಾಮಣ್ಣ ಪೂಜಾರಿ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.


ರಾಮಣ್ಣ ಅವರು ಮೂರು ವರ್ಷಗಳ ಹಿಂದೆ ಮನೆ ತೊರೆದಿದ್ದರು. ಮದ್ಯಪಾನ ವ್ಯಸನಿಯಾಗಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

- Advertisement -


ಉಪ್ಪಿನಂಗಡಿ ಬಸ್ ನಿಲ್ದಾಣದ ಪಂಚಾಯತ್ ಕಾಂಪ್ಲೆಕ್ಸ್ ನಲ್ಲಿ ಇಂದು ಬೆಳಿಗ್ಗೆ ಮೃತದೇಹ ನೇತಾಡುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮನೆಯವರಿಗೆ ವಿಷಯ ತಿಳಿಸಿದ್ದು, ಮನೆಯವರು ಆಸ್ಪತ್ರೆಗೆ ಧಾವಿಸಿ ಹೇಳಿಕೆ ನೀಡಿದ್ದಾರೆ.

ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ತಿಳಿಸಿದ್ದಾರೆ.

Join Whatsapp