ಉಪ್ಪಿನಂಗಡಿ ಭೀಕರ ಅಪಘಾತ | ತಾಯಿ ಮಗು ಮೇಲೆ ಹರಿದ ಬಸ್ಸು

Prasthutha|

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ತಾಯಿ ಮಗು ಮೇಲೆ ಕೆಎಸ್ ಆರ್ ಟಿ ಸಿ ಬಸ್ಸು ಹರಿದ ಪರಿಣಾಮ ಅವರಿಬ್ಬರೂ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

- Advertisement -

ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿ ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25), ಮತ್ತು ಅವರ ಪುತ್ರ ಶಾಹೀನ್ (1) ಮೃತಪಟ್ಟವರು.

ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ತನ್ನ ಮಗನೊಂದಿಗೆ ತೆರಳುತ್ತಿದ್ದರು. ಈ ಸಂದರ್ಭ ಬಸ್ ನಿಲ್ದಾಣಕ್ಕೆ ತಿರುಗುವಲ್ಲಿರುವ ನಂದಿನಿ ಹಾಲಿನ ಬೂತ್ ಎದುರಿನಿಂದ ಮತ್ತೊಂದು ಕಡೆಗೆ ಶಾಹಿದಾ ಮಗುವಿನೊಂದಿಗೆ ದಾಟುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅತಿ ವೇಗದಿಂದ ಬಸ್‌ ನಿಲ್ದಾಣದೊಳಗೆ ಬಂದ ಸರಕಾರಿ ಬಸ್ ತಾಯಿ ಮಗುವಿಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

- Advertisement -

ಬಸ್ಸುಗಳ ನಡುವಿನ ಪೈಪೋಟಿಯೇ ಈ ಘಟನೆಗೆ ಕಾರಣವೆಂದು ಸಾರ್ವಜನಿಕರು ಪ್ರತಿಭಟಿಸಿದ್ದು, ಬಸ್ಸು ನಿಲ್ದಾಣದ ಒಳಗೆ ಯಾವ ಬಸ್ಸುಗಳೂ ಪ್ರವೇಶಿಸದಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು, ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Join Whatsapp