ಉಪ್ಪಿನಂಗಡಿ | ಲಾರಿ-ಬಸ್ ನಡುವೆ ಅಪಘಾತ: ಚಾಲಕ ಮೃತ್ಯು, ಹಲವರಿಗೆ ಗಾಯ

Prasthutha|

ಉಪ್ಪಿನಂಗಡಿ: ಖಾಸಗಿ ಬಸ್ಸು ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ, ಲಾರಿ ಚಾಲಕ ಮೃತಪಟ್ಟು ಬಸ್ಸಿನಲ್ಲಿದ್ದ ಹಲವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

- Advertisement -


ದುರ್ಗಾಂಬಾ ಸಂಸ್ಥೆಯ ಖಾಸಗಿ ಬಸ್ ಹಾಗೂ ಕ್ಯಾಂಟರ್ ವಾಹನದ ನಡುವೆ ಈ ಡಿಕ್ಕಿ ಸಂಭವಿಸಿದೆ.


ಖಾಸಗಿ ಬಸ್ಸು ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತಿತ್ತು. ಕ್ಯಾಂಟರ್ ವಾಹನ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತಿತ್ತು. ಪೆರ್ನೆ ಬಳಿ ಮುಖಾಮುಖಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.



Join Whatsapp