Home ಟಾಪ್ ಸುದ್ದಿಗಳು ಉಪ್ಪಿನಂಗಡಿ | ಲಾರಿ-ಬಸ್ ನಡುವೆ ಅಪಘಾತ: ಚಾಲಕ ಮೃತ್ಯು, ಹಲವರಿಗೆ ಗಾಯ

ಉಪ್ಪಿನಂಗಡಿ | ಲಾರಿ-ಬಸ್ ನಡುವೆ ಅಪಘಾತ: ಚಾಲಕ ಮೃತ್ಯು, ಹಲವರಿಗೆ ಗಾಯ

ಉಪ್ಪಿನಂಗಡಿ: ಖಾಸಗಿ ಬಸ್ಸು ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ, ಲಾರಿ ಚಾಲಕ ಮೃತಪಟ್ಟು ಬಸ್ಸಿನಲ್ಲಿದ್ದ ಹಲವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.


ದುರ್ಗಾಂಬಾ ಸಂಸ್ಥೆಯ ಖಾಸಗಿ ಬಸ್ ಹಾಗೂ ಕ್ಯಾಂಟರ್ ವಾಹನದ ನಡುವೆ ಈ ಡಿಕ್ಕಿ ಸಂಭವಿಸಿದೆ.


ಖಾಸಗಿ ಬಸ್ಸು ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತಿತ್ತು. ಕ್ಯಾಂಟರ್ ವಾಹನ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತಿತ್ತು. ಪೆರ್ನೆ ಬಳಿ ಮುಖಾಮುಖಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

Join Whatsapp
Exit mobile version