UPSC ಫಲಿತಾಂಶ: ಕರ್ನಾಟಕ ಸಾಧಕರ ವಿವರ ಇಲ್ಲಿದೆ..

Prasthutha|

ನವದೆಹಲಿ : ಕೇಂದ್ರ ನಾಗರಿಕ ಸೇವಾ ಆಯೋಗ (UPSC) 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದ್ದು, ಕರ್ನಾಟಕದ 25 ಅಭ್ಯರ್ಥಿಗಳು ಪಾಸ್ ಆಗಿದ್ದಾರೆ.
ಈ ಸಲದ ಮುಖ್ಯ ಪರೀಕ್ಷೆಯಲ್ಲಿ ಕರ್ನಾಟಕದ 25 ಅಭ್ಯರ್ಥಿಗಳು ಪಾಸ್ ಆಗಿದ್ದು, ಅದರಲ್ಲಿ ದಾವಣಗೆರೆಯ ಅವಿನಾಶ್ 31ನೇ ಸ್ಥಾನ ಪಡೆದಿದ್ದಾರೆ. ಉಳಿದಂತೆ ಬೆನಕ ಪ್ರಸಾದ್ 92, ನಿಖಿಲ್ ಬಿ. ಪಾಟೀಲ್ 139, ವಿನಯ್ ಕುಮಾರ್ ಗಾಡಿಗೆ 151, ಚಿತ್ತರಂಜನ್ 155, ಕೆ. ಮನೋಜ್ ಕುಮಾರ್ 157, ಅಪೂರ್ವ ಬಸೂರ್ 191, ನಿತ್ಯಾ 207, ಮಂಜುನಾಥ್ 219, ರಾಜೇಶ್ ಪೊನ್ನಪ್ಪ 222, ಸಾಹಿತ್ಯ ಆಲದಕಟ್ಟಿ 150, ಕಲ್ಪಶ್ರೀ 291, ಅರುಣಾ 308, ದೀಪಕ್ ರಾಮಚಂದ್ರ ಶೇಠ್ 311ನೇ ರ್ಯಾಂಕ್, ಹರ್ಷವರ್ಧನ್ 318, ವಿನಯ್ ಕುಮಾರ್ 352, ಮೇಘನಾ 425, ಸವಿತಾ ಗೋಟ್ಯಾಲ್ 479, ಮೊಹಮ್ಮದ್ ಸಿದ್ದಿಕಿ ಷರೀಫ್ 516, ಚೇತನ್ ಕೆ. 532, ಎನ್.ಎಸ್ ಪ್ರಕಾಶ್ 568, ಪ್ರಶಾಂತ್ ಕುಮಾರ್ 641 ಹಾಗೂ ಸುಚಿನ್ ಕೆ.ವಿ 682ನೇ ರ್ಯಾಂಕ್ ಪಡೆದಿದ್ದಾರೆ.



Join Whatsapp