ಉರಿಗೌಡ, ನಂಜೇಗೌಡ ಸಿನಿಮಾಗೆ ಬ್ರೇಕ್: ಸಿಎಂ ಬೊಮ್ಮಾಯಿ ಹೇಳಿದ್ದೇನು?

Prasthutha|

ಬೆಂಗಳೂರು : ಉರಿಗೌಡ, ನಂಜೇಗೌಡ ಸಿನಿಮಾ ಸ್ಥಗಿತಗೊಳಿಸಲು ನಿರ್ಮಲಾನಂದ ಸ್ವಾಮಿಗಳು ತಿಳಿಸಿದ ಹಿನ್ನೆಲೆಯಲ್ಲಿ ಗುರುಗಳು ಹೇಳಿದಂತೆ ಕೇಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

- Advertisement -


ಸಚಿವ ಮುನಿರತ್ನ ಅವರು ಸಿನಿಮಾ ಮಾಡುತ್ತಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿರತ್ನ ಅವರು ಸಿನಿಮಾ ಮಾಡಲು ಹೊರಟಿದ್ದು, ಅದರ ಬಗ್ಗೆ ನನಗೆ ಪೂರ್ಣ ಮಾಹಿತಿ ಇಲ್ಲ. ಅವರಿಂದ ಪೂರ್ತಿ ಮಾಹಿತಿ ತಿಳಿದ ನಂತರ ಮಾತನಾಡುವುದಾಗಿ ಹೇಳಿದ್ದಾರೆ.


ಶ್ರೀಗಳು ಬೇಡ ಎಂದಿದ್ದಕ್ಕೆ ಮುನಿರತ್ನ ಹಿಂದೆ ಸರಿದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಗುರುಗಳು ಹೇಳಿದಂತೆ ಕೇಳಬೇಕು ಎಂದರು.

Join Whatsapp