Home ಟಾಪ್ ಸುದ್ದಿಗಳು ರಾಹುಲ್​ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ಧ ಬಳಕೆ: ಯತ್ನಾಳ್​ ವಿರುದ್ಧ ದೂರು

ರಾಹುಲ್​ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ಧ ಬಳಕೆ: ಯತ್ನಾಳ್​ ವಿರುದ್ಧ ದೂರು

ವಿಜಯಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್​ ವಿರುದ್ಧ ಅವಾಚ್ಯ ಪದಬಳಸಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ವಿರುದ್ಧ ವಿಜಯಪುರದ ಗಾಂಧಿ ಚೌಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಾಲಿಕೆ ನಾಮ‌ನಿರ್ದೇಶಿತ ಸದಸ್ಯ ಪರಶುರಾಮ ಹೊಸಮನಿ ಎಂಬುವರು ದೂರು ನೀಡಿದ್ದಾರೆ.

ಅಕ್ಟೋಬರ್​ 15 ವಿಜಯಪುರದ ಸಿದ್ದೇಶ್ವರ ಗುಡಿ ಹತ್ತಿರ ನಡೆದ “ವಕ್ಫ್​ ಹಠಾವೋ ದೇಶ ಬಚಾವೋ” ಕಾರ್ಯಕ್ರಮದಲ್ಲಿ ಭಾಷಣ ಮಾಡುವ ಭರದಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್​ ಅಹ್ಮದ್​ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ಮುಸ್ಲಿಂ ಧರ್ಮಕ್ಕೆ ನಿಂದನೆ ಮಾಡಿದ್ದಾರೆ

ಜೊತೆಗೆ ನಗರದ ಶಾಂತಿ ನಗರದ ಶಾಂತಿ ಸೌಹಾರ್ಧವನ್ನು ಕೆಡಿಸುವ ದುರುದ್ದೇಶದಿಂದ ಸಾರ್ವಜನಿಕವಾಗಿ ಇತರೆ ಧರ್ಮದವರನ್ನು ಹಿಯ್ಯಾಳಿಸಿ ಮಾತನಾಡಿ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಎಲ್ಲರಿಗೂ ಮಾನಸಿಕ ನೋವನ್ನುಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ವಿರುದ್ಧ​ ಭಾರತೀಯ ನ್ಯಾಯ ಸಂಹಿತೆ 2023 ರ (U/s-352,353(2)) ಕಲಂ ಅಡಿ ದೂರು ದಾಖಲಿಸಿದ್ದಾರೆ.

Join Whatsapp
Exit mobile version