ಉತ್ತರಪ್ರದೇಶ| ರಸ್ತೆ ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಮೃತ್ಯು

Prasthutha|

ಲಕ್ನೋ: ಉತ್ತರಪ್ರದೇಶದಲ್ಲಿ ತಡರಾತ್ರಿ ಕಾರು ಹಾಗು ಟ್ರಕ್ ನಡುವೆ ನಡೆದ ಅಪಘಾತದಲ್ಲಿ ಸುಲ್ತಾನ್’ಪುರ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ನೌಶಾದ್ ಖಾನ್ (42) ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

- Advertisement -

ನೌಶಾದ್ ಅವರು ತಮ್ಮ ಕಾರಿನಲ್ಲಿ ಸೋಮವಾರ ಸಂಜೆ ಮನೆಗೆ ಹಿಂದಿರುಗುತ್ತಿದ್ದಾಗ ಗೊಸಿಯಾಗಂಜ್ ಪ್ರದೇಶದಲ್ಲಿರುವ ತತಿಯಾನಗರ್ ಬಳಿ ಟ್ರಕ್’ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಉತ್ತರ ಪ್ರದೇಶ ಕಾಂಗ್ರೆಸ್ ಘಟಕವು, ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದೆ.

Join Whatsapp