ಉತ್ತರ ಪ್ರದೇಶ ವಿಧಾನ ಪರಿಷತ್‌ ಚುನಾವಣೆ; ಸಮಾಜವಾದಿ ಪಕ್ಷದಿಂದ ಕಫೀಲ್ ಖಾನ್ ಅಖಾಡಕ್ಕೆ

Prasthutha|

ಲಕ್ನೋ: ಮುಂಬರುವ ಉತ್ತರ ಪ್ರದೇಶ ಎಂಎಲ್‌ಸಿ ಚುನಾವಣೆಯಲ್ಲಿ ಡಿಯೋರಿಯಾ-ಕುಶಿನಗರ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಕಫಿಲ್‌ ಖಾನ್‌ ಸ್ಪರ್ಧಿಸಲಿದ್ದಾರೆ ಎಂದು ಎಸ್‌ಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ವಕ್ತಾರ ರಾಜೇಂದ್ರ ಚೌಧರಿ ಹೇಳಿದ್ದಾರೆ.

- Advertisement -

ಈ ಮಧ್ಯೆ ಕಫೀಲ್ ಖಾನ್ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದು, ಅವರ ಭೇಟಿಯ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಟ್ವೀಟ್‌ನಲ್ಲಿ, “ಗೌರವಾನ್ವಿತ ಮಾಜಿ ಮುಖ್ಯಮಂತ್ರಿ ಅಖಲೇಶ್‌ ಯಾದವ್  ಸರ್ ಅವರನ್ನು ಭೇಟಿ ಮಾಡಿ ಅವರಿಗೆ ‘ದಿ ಗೋರಖ್‌ಪುರ್‌ ಹಾಸ್ಪಿಟಲ್‌‌ ಟ್ರಾಜಿಡಿ’ ಪುಸ್ತಕದ ಪ್ರತಿಯನ್ನು ನೀಡಿದೆ” ಎಂದು ಬರೆದಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಗೋರಖ್‌ಪುರದ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜಿನ ಶಿಶುವೈದ್ಯ ಡಾ. ಕಫೀಲ್‌ ಖಾನ್ ರನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಸೇವೆಯಿಂದ ಅಮಾನತುಗೊಳಿಸಿತ್ತು. ಸಿಎಎ ವಿರೋಧಿ ಸಭೆಯಲ್ಲಿ ಭಾಷಣ ಮಾಡಿದ್ದಕ್ಕಾಗಿ ಬಂಧಿಸಿತ್ತು.

Join Whatsapp