ಕ್ಯಾನ್ಸರ್​ನಿಂದ ವ್ಯಕ್ತಿ ಮೃತ್ಯು, ದುಃಖ ತಾಳಲಾರದೆ ಚಿತೆಗೆ ಹಾರಿ ಪ್ರಾಣಬಿಟ್ಟ ಸ್ನೇಹಿತ!

Prasthutha|

ಲಖ್ನೋ: ಮೃತಪಟ್ಟ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆ ನೆರವೇರುತ್ತಿದ್ದಾಗ ದುಃಖ ತಾಳಲಾರದೆ ಅವರ ಸ್ನೇಹಿತ ಕೂಡ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶ ಯಮುನಾ ನದಿಯ ತಟದಲ್ಲಿ ನಡೆದಿದೆ.

- Advertisement -

ಅಶೋಕ್(42) ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಶನಿವಾರ ಮೃತಪಟ್ಟಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಯಮುನಾ ನದಿ ತಟದಲ್ಲಿ ಅಂತ್ಯಕ್ರಿಯೆ ನೆರವೇರುತ್ತಿತ್ತು.

ಆಗ ಮೃತನ ಸ್ನೇಹಿತ ಆನಂದ್(40) ಆಗಮಿಸಿದ್ದರು, ಜನರು ಅಂತ್ಯಕ್ರಿಯೆ ಮಾಡಿದ ಜಾಗದಿಂದ ಹೋಗುತ್ತಿರುವಾಗ ಆತ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣವೇ ಅವರನ್ನು ಆಗ್ರಾ ಮೆಡಿಕಲ್ ಕಾಲೇಜಿಗೆ ರವಾನಿಸಲಾಯಿತಾದರೂ , ಸುಟ್ಟಗಾಯಗಳು ಹೆಚ್ಚಾಗಿದ್ದರಿಂದ ಕೊನೆಯುಸಿರೆಳೆದಿದ್ದಾರೆ.

Join Whatsapp