ಉತ್ತರ ಪ್ರದೇಶ: ಶಾಲೆಯ ಏಳಿಗೆಗೆ ವಿದ್ಯಾರ್ಥಿಯನ್ನು ಬಲಿ ಕೊಟ್ಟ ಮಾಲೀಕ!

Prasthutha|

ಆಗ್ರಾ: ಶಾಲೆಯೊಂದರ ಏಳಿಗೆಗಾಗಿ ಎರಡನೇ ತರಗತಿಯ ವಿದ್ಯಾರ್ಥಿಯನ್ನು ಅದರ ಮಾಲೀಕ ಬಲಿ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

- Advertisement -


ಪ್ರಕರಣ ಸಂಬಂಧ ಶಾಲೆಯ ನಿರ್ದೇಶಕ, ಮಾಲೀಕ, ಪ್ರಾಂಶುಪಾಲ ಹಾಗೂ ಇಬ್ಬರು ಶಿಕ್ಷಕರನನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೊಲೆಗೀಡಾದ ವಿದ್ಯಾರ್ಥಿ ಕೃತಾರ್ಥ್ (11) ಶಾಲೆಯಲ್ಲಿ ಎರಡನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ಹಾಥ್ರಸ್ ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

- Advertisement -


ಡಿ.ಎಲ್ ಪಬ್ಲಿಕ್ ಸ್ಕೂಲ್ ನ ಮಾಲೀಕನಾದ ಜಸೋಧನ್ ಸಿಂಗ್ಗೆ ‘ತಂತ್ರ ಆಚರಣೆ’ಗಳ ಬಗ್ಗೆ ನಂಬಿಕೆಯಿದ್ದು, ಶಾಲೆ ಹಾಗೂ ಆತನ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಮಗುವನ್ನು ಬಲಿಕೊಡಬೇಕು ಎಂದು ಪುತ್ರ ಹಾಗೂ ಶಾಲೆಯ ನಿರ್ದೇಶಕ ದಿನೇಶ್ ಬಘೇಲ್ ಗೆ ಹೇಳಿದ್ದ. ಈ ಕೃತ್ಯಕ್ಕೆ ಪ್ರಾಂಶುಪಾಲ ಲಕ್ಷ್ಮಣ್ ಸಿಂಗ್, ಶಿಕ್ಷಕರಾದ ರಾಮಪ್ರಕಾಶ ಸೋಲಂಕಿ ಹಾಗೂ ವೀರ್ ಪಾಲ್ ಸಿಂಗ್ ಸಹಾಯ ಮಾಡಿದ್ದರು.

ಇವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103(1) ಅಡಿ ಪ್ರಕರಣ ದಾಖಲಿಸಿಕೊಂಡು ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



Join Whatsapp