ಉತ್ತರಪ್ರದೇಶ | ರುದ್ರಾಕ್ಷಿ ಮಾಲೆ ಧರಿಸಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ ಮತಾಂಧರು

Prasthutha|

ಲಕ್ನೋ: ಉತ್ತರ ಪ್ರದೇಶದ ಮೀರತ್‌ನಲ್ಲಿ ರುದ್ರಕ್ಷಿ ಮಾಲೆ ಧರಿಸಿದ್ದಕ್ಕಾಗಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ಗುಂಪೊಂದು ಹಲ್ಲೆ ನಡೆಸಿದೆ. ಸ್ಥಳೀಯ ಪತ್ರಕರ್ತ ಸಚಿನ್ ಗುಪ್ತಾ ಅವರು ಹಿಂದುತ್ವ ಗುಂಪೊಂದು ಹಲ್ಲೆ ನಡೆದಿದ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

- Advertisement -

ಸಲೂನ್‌ನಲ್ಲಿ ಉದ್ಯೋಗಿಯಾಗಿರುವ ಫೈಜ್ ಖಾನ್ ಹಲ್ಲೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದವರು ಬಿಜೆಪಿಯ ಯುವ ಮೋರ್ಚಾ ಕಾರ್ಯಕರ್ತರೆಂದು ತಿಳಿದು ಬಂದಿದೆ. ರುದ್ರಕ್ಷಿ ಮಾಲೆ ಧರಿಸಿದ್ದಕ್ಕಾಗಿ ಹಿಂದುತ್ವ ಗುಂಪು ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದೆ ಎಂದು ಸಚಿನ್ ಗುಪ್ತಾ ಟ್ವೀಟ್ ಮಾಡಿದ್ದಾರೆ. ಹಿಂದುತ್ವ ಗುಂಪು ಸಾರ್ವಜನಿಕವಾಗಿ ಫೈಜ್ ಖಾನ್ ಅವರನ್ನು ಅವಮಾನಿಸುವುದು, ತಳ್ಳುವುದು ಮತ್ತು ಮೀಸೆ ಹಿಡಿದೆಳೆಯುವುದು ವೀಡಿಯೋ ಸ್ಪಷ್ಟವಾಗಿ ತೋರಿಸುತ್ತದೆ.

ವೀಡಿಯೋ ವೈರಲ್ ಆಗುತ್ತಿದ್ದಂತೆ ಅರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಯುವಕ ಇನ್ನೂ ದೂರು ನೀಡಿಲ್ಲ, ವಿಡಿಯೋ ತುಣುಕನ್ನು ಪರಿಶೀಲಿಸಿ ಯುವಕನನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುವುದು. ಯುವಕ ದೂರು ನೀಡಿದರೆ ಖಂಡಿತವಾಗಿಯೂ ಪ್ರಕರಣ ದಾಖಲಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp