ಪೊಲೀಸ್ ಕಸ್ಟಡಿ ಸಾವಿನಲ್ಲಿ ಉತ್ತರ ಪ್ರದೇಶಕ್ಕೆ ದೇಶದಲ್ಲೇ ಮೊದಲ ಸ್ಥಾನ: ಕಾಂಗ್ರೆಸ್

Prasthutha|

ನೊಯಿಡಾ: ರಾಜ್ಯದಲ್ಲಿ ಪೊಲೀಸ್ ವಶದಲ್ಲಿರುವಾಗ ಮೃತಪಟ್ಟ ಪ್ರತಿಯೊಂದು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಉತ್ತರ ಪ್ರದೇಶ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಪಾಂಖುರಿ ಪಾಠಕ್ ಶುಕ್ರವಾರ ಆಗ್ರಹಿಸಿದ್ದಾರೆ.

- Advertisement -


ರಾಜ್ಯದಲ್ಲಿ ಪೊಲೀಸ್ ಆಡಳಿತ ನಿಯಂತ್ರಣ ತಪ್ಪಿದೆ. ಇದು ಭಾರಿ ಆತಂಕಕಾರಿ ಹಾಗೂ ಅಪಾಯಕಾರಿ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.


ಅಲ್ಲದೆ ಪೊಲೀಸ್ ವಶದಲ್ಲಿರುವವರ ಸಾವಿನಲ್ಲಿ ಉತ್ತರ ಪ್ರದೇಶವು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಅವರು ಹೇಳಿದ್ದಾರೆ.

- Advertisement -


ಗ್ಯಾಂಗ್ ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಪೊಲೀಸ್ ವಶದಲ್ಲಿದ್ದಾಗಲೇ ಗುರುವಾರ ಸಾವಿಗೀಡಾಗಿದ್ದರು. ಇದರ ಬೆನ್ನಲ್ಲೇ ಪಾಂಖುರಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

Join Whatsapp