ಉತ್ತರ ಪ್ರದೇಶ ಕಂದಾಯ ಸಚಿವ ವಿಜಯ್ ಕಶ್ಯಪ್ ಕೊರೊನಕ್ಕೆ ಬಲಿ

Prasthutha|

ಲಖನೌ : ಉತ್ತರ ಪ್ರದೇಶ ಕಂದಾಯ ಸಚಿವ ವಿಜಯ್ ಕಶ್ಯಪ್ ಕೊರೊನ ಸೋಂಕಿನಿಂದ ನಿಧನರಾಗಿದ್ದಾರೆ. ಮೃತರು 53 ವರ್ಷದವರಾಗಿದ್ದರು. ಗುರುಗ್ರಾಮದ ವೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕಷ್ಯಪ್ ಅವರು ಕೊನೆಯುಸಿರೆಳೆದಿದ್ದಾರೆ.

- Advertisement -

ಕಷ್ಯಪ್ ಅವರು ಉತ್ತರ ಪ್ರದೇಶದ ಚಾರ್ತವಾಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರು ಕಷ್ಯಪ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Join Whatsapp