Home ಟಾಪ್ ಸುದ್ದಿಗಳು ಉತ್ತರಾಖಂಡ: ಬಸ್ ಕಂದಕಕ್ಕೆ ಬಿದ್ದು 25 ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡ: ಬಸ್ ಕಂದಕಕ್ಕೆ ಬಿದ್ದು 25 ಮಂದಿ ಸಾವು, ಹಲವರಿಗೆ ಗಾಯ

ಡೆಹ್ರಡೂನ್ : ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ  25 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡ್ ರಾಜ್ಯದ ಧುಮಕೋಟ್ನ ಬಿರೋಖಲ್ ಪ್ರದೇಶದಲ್ಲಿ ಗುರುವಾರ ತಡ ರಾತ್ರಿ ಸಂಭವಿಸಿದೆ.

ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯ ಸಿಮ್ಡಿ ಗ್ರಾಮದ ಬಳಿ ಮಂಗಳವಾರ 45 ರಿಂದ 50 ಜನರ ಮದುವೆ ಮೆರವಣಿಗೆಯನ್ನು ಸಾಗಿಸುತ್ತಿದ್ದ ಬಸ್ ಕಂದಕಕ್ಕೆ ಬಿದ್ದು, ಅಪಘಾತದಲ್ಲಿ ಇಪ್ಪತ್ತೈದು ಜನರು ಸಾವನ್ನಪ್ಪಿದ್ದಾರೆ.

ಪೊಲೀಸ್ ಮತ್ತು ಎಸ್ ಡಿಆರ್ ಎಫ್ ತಂಡಗಳು 21 ಜನರನ್ನು ರಕ್ಷಿಸಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಪೊಲೀಸ್ ಮತ್ತು ಎಸ್ ಡಿಆರ್ ಎಫ್ ತಂಡ ಸ್ಥಳದಲ್ಲಿದ್ದು, ಇಂದು ಕೂಡಾ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Join Whatsapp
Exit mobile version