ಇಂದು ಉತ್ತರಾಖಂಡ್ ಮುಖ್ಯಮಂತ್ರಿ ಆಯ್ಕೆ ಸಭೆ: ನಾಳೆಯೇ ಹೊಸ ಸಿಎಂ ಪ್ರಮಾಣ ವಚನ ಸ್ವೀಕಾರ

Prasthutha|

ಡೆಹ್ರಾಡೂನ್: ಉತ್ತರಾಖಂಡ್’ಗೆ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಂಬಂಧ ಇಂದು ಡೆಹ್ರಾಡೂನ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಉತ್ತರಾಖಂಡ್’ನ ಕೇಂದ್ರ ವೀಕ್ಷಕರಾದ ರಾಜನಾಥ್ ಸಿಂಗ್ ಮತ್ತು ಮೀನಾಕ್ಷಿ ಲೇಖಿ ಈ ಸಭೆಯಲ್ಲಿ ಪಾಲ್ಗೊಳ್ಳುವರು. ಇಂದು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿ, ಮಂಗಳವಾರವೇ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಶಾದಾಬ್ ಶಾಮ್ಸ್ ತಿಳಿಸಿದ್ದಾರೆ..

- Advertisement -

ಉತ್ತರಾಖಂಡ್’ನಲ್ಲಿ ಆಯ್ಕೆಯಾದ ಹೊಸ ಶಾಸಕರು ಇಂದು ವಿಧಾನಸಭೆಯಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅದಾದ ಬಳಿಕ ಈ ಸಭೆ ನಡೆಯಲಿದೆ. ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಹೆಸರನ್ನು ಘೋಷಿಸಲಾಗುವುದು ಎಂದು ಉತ್ತರಾಖಂಡ್ ಬಿಜೆಪಿ ಮುಖ್ಯಸ್ಥ ಮದನ್ ಕೌಶಿಕ್ ತಿಳಿಸಿದ್ದಾರೆ.

ಹಿಂದಿನ ಅವಧಿಯಲ್ಲಿ ಉತ್ತರಾಖಂಡ್’ನಲ್ಲಿ ಎರಡು ಬಾರಿ ಮುಖ್ಯಮಂತ್ರಿಯನ್ನು ಬದಲಾಯಿಸಲಾಗಿತ್ತು. ಬಳಿಕ ಪುಷ್ಕರ್ ಸಿಂಗ್ ಧಮಿಯವರನ್ನು ಸಿಎಂ ಆಗಿ ನೇಮಕ ಮಾಡಲಾಗಿತ್ತು. ಆದರೆ ಈ ಬಾರಿ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಭುವನ್ ಚಂದ್ರ ಕಪ್ರಿ ಎದುರು 6 ಸಾವಿರಕ್ಕೂ ಅಧಿಕ ಮತಗಳಿಂದ ಸೋತಿದ್ದರು. ಹೀಗಾಗಿ ಅಲ್ಲಿ ಸಿಎಂ ಬದಲಾವಣೆ ಮಾಡಲು ಬಿಜೆಪಿ ನಿರ್ಧರಿಸಿದೆ.

- Advertisement -

ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ, ಇನ್ನೂ ಹಲವು ಬಿಜೆಪಿ ಗಣ್ಯರು ಪಾಲ್ಗೊಳ್ಳಲಿದ್ದಾರೆ.

Join Whatsapp