ವಿವಾದಾತ್ಮಕ ‘ಏಕರೂಪ ನಾಗರಿಕ ಸಂಹಿತೆ’ಯನ್ನು ಜಾರಿಗೊಳಿಸಲು ಮುಂದಾದ ಉತ್ತರಾಖಂಡ ಸರ್ಕಾರ

Prasthutha|

ವಿವಾದಗಳ ಸುಳಿಯಲ್ಲಿರುವ ‘ಏಕರೂಪ ನಾಗರಿಕ ಸಂಹಿತೆ’ ಕಾನೂನನ್ನು ಜಾರಿಗೊಳಿಸುವ ಎಲ್ಲಾ ಕಾರ್ಯಯೋಜನೆಗೆ ಉತ್ತರಾಖಂಡ ರಾಜ್ಯವು ಸಿದ್ಧತೆ ನಡೆಸಿದೆ.

- Advertisement -

“ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರುವ ನಿರ್ಧಾರವನ್ನು ನಮ್ಮ ಸರ್ಕಾರ ಕೈಗೊಂಡಿದ್ದು, ಶೀಘ್ರದಲ್ಲೇ ತಜ್ಞರ ಸಮಿತಿಯನ್ನು ರಚಿಸಿ ರಾಜ್ಯಾದ್ಯಂತ ಜಾರಿಗೆ ತರಲಾಗುವುದು” ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

ಸಚಿವ ಸಂಪುಟ ಸರ್ವಾನುಮತದಿಂದ ಈ ನಿರ್ಧಾರಕ್ಕೆ ಹಸಿರು ನಿಶಾನೆ ತೋರಿದ್ದು, ಉತ್ತರಾಖಂಡ ದೇಶದಲ್ಲೇ ಏಕರೂಪ ನಾಗರಿಕ ಸಂಹಿತೆ ಕಾನೂನನ್ನು ಜಾರಿಗೊಳಿಸಲು ನಿರ್ಧಾರ ಕೈಗೊಂಡಿರುವ ಪ್ರಥಮ ರಾಜ್ಯವಾಗಿದೆ.

Join Whatsapp