ಉತ್ತರ ಪ್ರದೇಶ | ಅತ್ಯಾಚಾರ ಆರೋಪಿಗಳಿಗೆ ಸಂತ್ರಸ್ತೆಯಿಂದ ಕಪಾಳಕ್ಕೆ ಹೊಡೆಸಿ ಪ್ರಕರಣ ಇತ್ಯರ್ಥಕ್ಕೆ ಪಂಚಾಯತ್ ಸೂಚನೆ !

Prasthutha|

ಉತ್ತರ ಪ್ರದೇಶದಲ್ಲಿ ವಿಲಕ್ಷಣ ಘಟನೆ ನಡೆದಿದ್ದು, ಇಲ್ಲಿನ  ಮಹಾರಾಜ್‌ಗಂಜ್‌ ಜಿಲ್ಲೆಯಲ್ಲಿ ಅತ್ಯಾಚಾರ ಎಸಗಿದ್ದ ಆರೋಪಿಗಳಿಂದ 50,000 ರೂ ಪಡೆದು, ಕಪಾಳಕ್ಕೆ ಬೂಟಿನಿಂದ ಐದು ಬಾರಿ ಹೊಡೆದು ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಸಂತ್ರಸ್ತೆಗೆ ಒತ್ತಾಯಿಸಿರುವ ಘಟನೆ ನಡೆದಿದೆ. ಜಿಲ್ಲೆಯ ಕೋತಿಭರ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆಯ ಕುಟುಂಬವು ಪಂಚಾಯತ್‌ನ ನಿರ್ಧಾರವನ್ನು ನಿರಾಕರಿಸಿದ್ದು, ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಪಂಚಾಯತ್‌ನ ವಿವಾದಾತ್ಮಕ ನಿರ್ಧಾರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ಬಳಿಕ, ಸಿಆರ್‌ಪಿಸಿ ಸೆಕ್ಷನ್ 164 ರ ಅಡಿಯಲ್ಲಿ ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ಪಡೆದುಕೊಂಡು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಪೊಲೀಸರಿಗೆ ಮಹಾರಾಜ್‌ಗಂಜ್‌ನ ಎಸ್‌ಪಿ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜೂನ್‌ 23ರಂದು ಕೋತಿಭರ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರದೇಶದ ನಿವಾಸಿಯಾದ ಬಾಲಕಿಯ ಮೇಲೆ ಅದೇ ಗ್ರಾಮದ ಯುವಕರು ಅತ್ಯಾಚಾರ ಎಸಗಿದ್ದರು. ಈ ಬಗ್ಗೆ ಬಾಲಕಿಯ ತಾಯಿ ಪಂಚಾಯತಿಗೆ ದೂರು ನೀಡಿದ್ದರು. ಆರೋಪಿಗಳಿಂದ 50,000 ರೂ.ಗಳನ್ನು ತೆಗೆದುಕೊಂಡು, ಅವರ ಕಪಾಳಕ್ಕೆ ಬೂಟಿನಿಂದ ಐದು ಬಾರಿ ಹೊಡೆದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಪಂಚಾಯತ್ ಸದಸ್ಯರು ಸೂಚನೆ ನೀಡಿದ್ದರು.

- Advertisement -

ಆದರೆ, ಬಾಲಕಿಯ ಕುಟುಂಬ ಈ ನಿರ್ಧಾರವನ್ನು ನಿರಾಕರಿಸಿ, ಜೂನ್ 24 ರಂದು ಕೋತಿಭಾರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿತ್ತು. ಕುಟುಂಬದ ದೂರಿನ ಮೇರೆಗೆ, ಆರೋಪಿಗಳ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಪೋಕ್ಸೊ ಕಾಯ್ದೆಯ ಐಪಿಸಿ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp