ರಾಜ್ಯದಲ್ಲಿ ಒಂದು ದಿನ ಲಸಿಕಾ ಅಭಿಯಾನ: ಡಾ.ಕೆ.ಸುಧಾಕರ್

Prasthutha|

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ವಾರದಲ್ಲಿ ಒಂದು ದಿನ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

- Advertisement -


ಚಿಕ್ಕಬಳ್ಳಾಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಹೆಚ್ಚಿನ ಲಸಿಕೆ ಪೂರೈಸುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದು, ಅದರಂತೆ ಮುಂದಿನ ತಿಂಗಳಿನಿಂದ ಪ್ರತಿ ನಿತ್ಯ ಐದು ಲಕ್ಷ ಲಸಿಕೆ ನೀಡಲಾಗುವುದು. ವಾರದಲ್ಲಿ ಒಂದು ದಿನ ನಡೆಯಲಿರುವ ಲಸಿಕಾ ಅಭಿಯಾನದಲ್ಲಿ ಕನಿಷ್ಠ 15ರಿಂದ 20 ಲಕ್ಷ ಡೋಸ್ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಇನ್ನು ಎರಡು ತಿಂಗಳ ಅವಧಿಯಲ್ಲಿ ಬೆಂಗಳೂರಿನ ಜನತೆಗೆ ಎರಡೂ ಡೋಸ್ ಲಸಿಕೆ ನೀಡಲಾಗುವುದು ಎಂದು ಸಚಿವ ಸುಧಾಕರ್ ಹೇಳಿದರು

Join Whatsapp