ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಟ್ವೀಟ್: ಆರೋಪಿ ವೈಭವ್ ಗಣೇಶ್ ಬಂಧನ

Prasthutha|

ಬೆಂಗಳೂರು:  ವಿಮಾನ ನಿಲ್ದಾಣದಲ್ಲಿ ಬಾಂಬ್ ಹಾಕುವುದಾಗಿ ಬೆದರಿಕೆ ಟ್ವೀಟ್ ಮಾಡಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಸೈಬರ್ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.

- Advertisement -

ಕೊಡ್ಲು ಗೇಟ್ ನಿವಾಸಿ ವೈಭವ್ ಗಣೇಶ್ (20) ಬಂಧಿತ ಆರೋಪಿಯಾಗಿದ್ದು, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.

ಡಿ. 10ರಂದು ಆರೋಪಿ ತನ್ನ ಟ್ವಿಟರ್ ಖಾತೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಖಾತೆಯನ್ನು ಟ್ಯಾಗ್ ಮಾಡಿ ನಾನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುತ್ತೇನೆ ಎಂದು ಇಂಗ್ಲಿಷ್’ನಲ್ಲಿ ಟ್ವೀಟ್ ಮಾಡಿದ್ದ.

- Advertisement -

ಬಾಂಬ್ ಬೆದರಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಪೋರ್ಟ್ ಮ್ಯಾನೇಜರ್ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಕುರಿತು ಸೈಬರ್ ಕ್ರೈಮ್ ಪೊಲೀಸರ ಸಹಯೋಗದೊಂದಿಗೆ ತನಿಖೆ ಆರಂಭಿಸಿದ್ದ ಸಿಟಿ ಪೊಲೀಸರು ಬಾಂಬ್ ಬೆದರಿಕೆ ಹಾಕಿದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

Join Whatsapp