Home ಟಾಪ್ ಸುದ್ದಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಂದು ಬಿಜೆಪಿಯಿಂದ ರಾಜಭವನ ಚಲೋ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಂದು ಬಿಜೆಪಿಯಿಂದ ರಾಜಭವನ ಚಲೋ

ಬೆಂಗಳೂರು: ಸಚಿವ ಬಿ.ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಇಂದು ರಾಜಭವನ ಚಲೋ ನಡೆಯಲಿದೆ.

ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದಿಂದ ಹಲವಾರು ವೈಯಕ್ತಿಕ ಖಾತೆಗಳಿಗೆ ಅಕ್ರಮವಾಗಿ ಹಣವನ್ನು ವರ್ಗಾಯಿಸಿದ ಆರೋಪವನ್ನು ನಾಗೇಂದ್ರ ಎದುರಿಸುತ್ತಿದ್ದಾರೆ.

ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಳೆದ ವಾರ ಗಡುವು ನೀಡಿತ್ತು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪಕ್ಷದ ನಾಯಕರು ಅಶೋಕ ಅವರ ಕೊಠಡಿಯಲ್ಲಿ ಸಭೆ ಸೇರಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವ ವಿಧಾನಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಿದ್ದಾರೆ.

Join Whatsapp
Exit mobile version