Home ಟಾಪ್ ಸುದ್ದಿಗಳು ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ವಜಾಕ್ಕೆ ಬಿಜೆಪಿ ಗಡುವು

ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ವಜಾಕ್ಕೆ ಬಿಜೆಪಿ ಗಡುವು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಲು ಜೂನ್ 6ರವರೆಗೆ ಗಡುವು ನೀಡಿರುವ ಬಿಜೆಪಿ, ಅವರಿಂದ ರಾಜೀನಾಮೆ ಪಡೆಯದೇ ಇದ್ದರೆ ರಾಜ್ಯ ವ್ಯಾಪಿ ಉಗ್ರ ಹೋರಾಟ ಮಾಡುವುದಾಗಿ ಬಿಜೆಪಿ ಹೇಳಿದೆ.

ಪಕ್ಷದ ಕಚೇರಿಯಲ್ಲಿ ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರೋಧಪಕ್ಷದ ನಾಯಕ ಆರ್.ಅಶೋಕ ಅವರು, ಈ ಪ್ರಕರಣವನ್ನು ತಾರ್ಕಿಕ ಅಂತ್ಯ ಮುಟ್ಟಿಸದೇ ವಿರಮಿಸುವುದಿಲ್ಲ ಎಂದು ಹೇಳಿದರು.


ದಲಿತ ವರ್ಗದವರಿಗೆ ಸೇರಿದ ಹಣವನ್ನು ಈ ಸರ್ಕಾರ ಲೂಟಿ ಮಾಡಿದೆ. ಈ ಹಣವನ್ನು ಆಂಧ್ರ, ತೆಲಂಗಾಣ ಮುಂತಾದ ಕಡೆಗಳಲ್ಲಿ ಡ್ರಾ ಮಾಡಿಕೊಳ್ಳಲಾಗಿದೆ. ಇವೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಬರದೇ ನಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.

Join Whatsapp
Exit mobile version