ವಾಲ್ಮೀಕಿ ಹಗರಣ: ನಾಗೇಂದ್ರ ಆಪ್ತರ ಮನೆ ಮೇಲೆ ಇ.ಡಿ ದಾಳಿ

Prasthutha|

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ಬುಧವಾರ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -


ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಏಕಕಾಲಕ್ಕೆ ಇ.ಡಿ ದಾಳಿ ನಡೆಸಿದೆ. ನಾಗೇಂದ್ರ ಆಪ್ತ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಸಹಾಯಕರು ಹಾಗೂ ಆಪ್ತರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಇನ್ನು ನಾಗೇಂದ್ರ ಆಪ್ತ ವಿಜಯ ಕುಮಾರ್ ಮನೆ ಮೇಲೂ ಇ.ಡಿ ದಾಳಿ ನಡೆಸಿದೆ. ಬಳ್ಳಾರಿಯಲ್ಲಿ ನಾಗೇಂದ್ರ ಅವರ ಒಟ್ಟು ನಾಲ್ಕು ಜನ ಅಪ್ತರ ಮನೆಯ ಮೇಲೆ ಇ.ಡಿ ದಾಳಿಯಾಗಿದೆ.



Join Whatsapp